25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

ಕಾಪಿನಡ್ಕ : ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ, ಹಿರಿಯರಾದ ವಸಂತ ಕೆ ಸಾಲ್ಯಾನ್ ರವರ ಶಿವಗಿರಿ ಕೃಪಾ ಮನೆಯಲ್ಲಿ ಎ.23 ರಂದು ಸತ್ಯನಾರಾಯಣ ಪೂಜೆ, ಅಂದ್ರ ಗೀತಾ ಗಾಯನ ಕಾರ್ಯಕ್ರಮ ಜರುಗಿತು.

ಪ್ರತೀವರ್ಷ ನಡೆಯುವ ಈ ಪೂಜಾ ಕಾರ್ಯಕ್ರಮವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ಶ್ರೀ ಶಾರದಾ ಅಂಧರ ಗೀತಾ ಗಾಯನ ಕಲಾ ಸಂಘ ಮಂಗಳೂರು ಇವರ ಸಂಗೀತ ಕಾರ್ಯಕ್ರಮವನ್ನು ನಡೆಸಲಾಯಿತು.‌ ಅತ್ಯಂತ ಮಹತ್ವಪೂರ್ಣವಾದ ಸಂದೇಶವನ್ನು ಸಾರಿದ ಈ ಕಾರ್ಯಕ್ರಮ ಬಂದವರ ಮನಸು ಗೆದ್ದಿತು.

ತುಮಕೂರು, ಕಾರವಾರ, ಕಡೂರು, ಶೃಂಗೇರಿಯ ಒಂಬತ್ತು ಅಂಧ ಕಲಾವಿದರು ನಡೆಸಿಕೊಟ್ಟ ಈ ಕಾರ್ಯಕ್ರಮ‌ ಬದುಕಿಗೆ ಸ್ಫೂರ್ತಿಯನ್ನ ತುಂಬಿತು.ಕಾರ್ಯಕ್ರಮದಲ್ಲಿ ವಸಂತ ಸಾಲಿಯಾನ್ ಕುಟುಂಬಿಕರು ಎಲ್ಲಾ ಕಲಾವಿದರನ್ನು ಗುರುತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಹಿರಿಯರಾದ ವಸಂತ ಸಾಲ್ಯಾನ್, ಶ್ರೀಮತಿ ಜಲಜಾ ವಿ ಸಾಲಿಯಾನ್ , ಸಂತೋಷ್ ಕುಮಾರ್-ಭಾರತಿ ಸಂತೋಷ್, ಸುಜಯ ಆರ್ ಸಾಲಿಯಾನ್-ರಮೇಶ್ ಸಾಲಿಯಾನ್ ಇರ್ವತ್ತೂರು, ಯೋಗೀಶ್ ಪೂಜಾರಿ ಕಡ್ತಿಲ- ಸಂಧ್ಯಾಲಕ್ಷ್ಮಿ ಮಡಂತ್ಯಾರು, ಸೌಮ್ಯಲಕ್ಷ್ಮಿ- ರತ್ನಾಕರ ಸುವರ್ಣ ಮಂಗಳೂರು,ದಿವ್ಯಾಲಕ್ಷ್ಮಿ ಮತ್ತು ಮನೋಜ್ ಕುಮಾರ್ ಇರ್ವತ್ತೂರು,ರಾಜಲಕ್ಷ್ಮಿ- ಜೀವನ್ ಎನ್ ಉಪಸ್ಥಿತರಿದ್ದರು.

ಯುವಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

Related posts

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya
error: Content is protected !!