24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

ಕಾಪಿನಡ್ಕ : ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ, ಹಿರಿಯರಾದ ವಸಂತ ಕೆ ಸಾಲ್ಯಾನ್ ರವರ ಶಿವಗಿರಿ ಕೃಪಾ ಮನೆಯಲ್ಲಿ ಎ.23 ರಂದು ಸತ್ಯನಾರಾಯಣ ಪೂಜೆ, ಅಂದ್ರ ಗೀತಾ ಗಾಯನ ಕಾರ್ಯಕ್ರಮ ಜರುಗಿತು.

ಪ್ರತೀವರ್ಷ ನಡೆಯುವ ಈ ಪೂಜಾ ಕಾರ್ಯಕ್ರಮವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ಶ್ರೀ ಶಾರದಾ ಅಂಧರ ಗೀತಾ ಗಾಯನ ಕಲಾ ಸಂಘ ಮಂಗಳೂರು ಇವರ ಸಂಗೀತ ಕಾರ್ಯಕ್ರಮವನ್ನು ನಡೆಸಲಾಯಿತು.‌ ಅತ್ಯಂತ ಮಹತ್ವಪೂರ್ಣವಾದ ಸಂದೇಶವನ್ನು ಸಾರಿದ ಈ ಕಾರ್ಯಕ್ರಮ ಬಂದವರ ಮನಸು ಗೆದ್ದಿತು.

ತುಮಕೂರು, ಕಾರವಾರ, ಕಡೂರು, ಶೃಂಗೇರಿಯ ಒಂಬತ್ತು ಅಂಧ ಕಲಾವಿದರು ನಡೆಸಿಕೊಟ್ಟ ಈ ಕಾರ್ಯಕ್ರಮ‌ ಬದುಕಿಗೆ ಸ್ಫೂರ್ತಿಯನ್ನ ತುಂಬಿತು.ಕಾರ್ಯಕ್ರಮದಲ್ಲಿ ವಸಂತ ಸಾಲಿಯಾನ್ ಕುಟುಂಬಿಕರು ಎಲ್ಲಾ ಕಲಾವಿದರನ್ನು ಗುರುತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಹಿರಿಯರಾದ ವಸಂತ ಸಾಲ್ಯಾನ್, ಶ್ರೀಮತಿ ಜಲಜಾ ವಿ ಸಾಲಿಯಾನ್ , ಸಂತೋಷ್ ಕುಮಾರ್-ಭಾರತಿ ಸಂತೋಷ್, ಸುಜಯ ಆರ್ ಸಾಲಿಯಾನ್-ರಮೇಶ್ ಸಾಲಿಯಾನ್ ಇರ್ವತ್ತೂರು, ಯೋಗೀಶ್ ಪೂಜಾರಿ ಕಡ್ತಿಲ- ಸಂಧ್ಯಾಲಕ್ಷ್ಮಿ ಮಡಂತ್ಯಾರು, ಸೌಮ್ಯಲಕ್ಷ್ಮಿ- ರತ್ನಾಕರ ಸುವರ್ಣ ಮಂಗಳೂರು,ದಿವ್ಯಾಲಕ್ಷ್ಮಿ ಮತ್ತು ಮನೋಜ್ ಕುಮಾರ್ ಇರ್ವತ್ತೂರು,ರಾಜಲಕ್ಷ್ಮಿ- ಜೀವನ್ ಎನ್ ಉಪಸ್ಥಿತರಿದ್ದರು.

ಯುವಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya
error: Content is protected !!