23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

ಕಾಪಿನಡ್ಕ : ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ, ಹಿರಿಯರಾದ ವಸಂತ ಕೆ ಸಾಲ್ಯಾನ್ ರವರ ಶಿವಗಿರಿ ಕೃಪಾ ಮನೆಯಲ್ಲಿ ಎ.23 ರಂದು ಸತ್ಯನಾರಾಯಣ ಪೂಜೆ, ಅಂದ್ರ ಗೀತಾ ಗಾಯನ ಕಾರ್ಯಕ್ರಮ ಜರುಗಿತು.

ಪ್ರತೀವರ್ಷ ನಡೆಯುವ ಈ ಪೂಜಾ ಕಾರ್ಯಕ್ರಮವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ಶ್ರೀ ಶಾರದಾ ಅಂಧರ ಗೀತಾ ಗಾಯನ ಕಲಾ ಸಂಘ ಮಂಗಳೂರು ಇವರ ಸಂಗೀತ ಕಾರ್ಯಕ್ರಮವನ್ನು ನಡೆಸಲಾಯಿತು.‌ ಅತ್ಯಂತ ಮಹತ್ವಪೂರ್ಣವಾದ ಸಂದೇಶವನ್ನು ಸಾರಿದ ಈ ಕಾರ್ಯಕ್ರಮ ಬಂದವರ ಮನಸು ಗೆದ್ದಿತು.

ತುಮಕೂರು, ಕಾರವಾರ, ಕಡೂರು, ಶೃಂಗೇರಿಯ ಒಂಬತ್ತು ಅಂಧ ಕಲಾವಿದರು ನಡೆಸಿಕೊಟ್ಟ ಈ ಕಾರ್ಯಕ್ರಮ‌ ಬದುಕಿಗೆ ಸ್ಫೂರ್ತಿಯನ್ನ ತುಂಬಿತು.ಕಾರ್ಯಕ್ರಮದಲ್ಲಿ ವಸಂತ ಸಾಲಿಯಾನ್ ಕುಟುಂಬಿಕರು ಎಲ್ಲಾ ಕಲಾವಿದರನ್ನು ಗುರುತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಹಿರಿಯರಾದ ವಸಂತ ಸಾಲ್ಯಾನ್, ಶ್ರೀಮತಿ ಜಲಜಾ ವಿ ಸಾಲಿಯಾನ್ , ಸಂತೋಷ್ ಕುಮಾರ್-ಭಾರತಿ ಸಂತೋಷ್, ಸುಜಯ ಆರ್ ಸಾಲಿಯಾನ್-ರಮೇಶ್ ಸಾಲಿಯಾನ್ ಇರ್ವತ್ತೂರು, ಯೋಗೀಶ್ ಪೂಜಾರಿ ಕಡ್ತಿಲ- ಸಂಧ್ಯಾಲಕ್ಷ್ಮಿ ಮಡಂತ್ಯಾರು, ಸೌಮ್ಯಲಕ್ಷ್ಮಿ- ರತ್ನಾಕರ ಸುವರ್ಣ ಮಂಗಳೂರು,ದಿವ್ಯಾಲಕ್ಷ್ಮಿ ಮತ್ತು ಮನೋಜ್ ಕುಮಾರ್ ಇರ್ವತ್ತೂರು,ರಾಜಲಕ್ಷ್ಮಿ- ಜೀವನ್ ಎನ್ ಉಪಸ್ಥಿತರಿದ್ದರು.

ಯುವಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

Related posts

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya
error: Content is protected !!