23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಬೆಳ್ತಂಗಡಿ: ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನಡೆಯುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಮೇ 3 ರಂದು ಬುಧವಾರ ಸಂಜೆ 6.50 ರ ಗೋಧೋಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.
ಈ ಬಾರಿಯ ವಿವಾಹ ಸಮಾರಂಭದಲ್ಲಿ ದೇಶದ ಹಾಗೂ ವಿವಿಧ ರಾಜ್ಯಗಳ ಸುಮಾರು 190 ಜೋಡಿ ವಧು-ವರರು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ, 200 ಜೋಡಿಯವರೆಗೆ ಬರುವ ಸಾಧ್ಯತೆಯಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

ಈ ಪೈಕಿ ಸುಮಾರು 190 ಜೋಡಿಗಳ ದಾಖಲೆಗಳನ್ನು ಪರಿಶೀಲಿಸಿ ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಡಿ ಬಾಸ್ ಖ್ಯಾತಿಯ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರು ಭಾಗವಹಿಸಲಿದ್ದು ವಿಶೇಷ ಆಕರ್ಷಣೆಯಾಗಿದೆ. ಅಲ್ಲದೆ ನಾಡಿನ ಗಣ್ಯರು, ಜನಪ್ರತಿನಿಧಿಗಳು, ಹೆಗ್ಗಡೆ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

Related posts

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya
error: Content is protected !!