ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.

ಕಾಂಗ್ರೆಸ್‌ ಕಾರ್ಯಕರ್ತರಾದ ಬಾಲಕೃಷ್ಣ ಉದ್ಲಾಜೆ, ಎಜೆ ಜೋಸೆಫ್ ಕಾಯದ, ಸಿಬಿನ್ ಎಕ್ ಅವರನ್ನು ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್ ಅಲಂಬಿಲ, ಕಳೆಂಜ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ. ಕೊಯ್ದ, ಕಳೆಂಜ ಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ಧನಂಜಯ್‌ ಗೌಡ, ಕಳೆಂಜ ಪಂಚಾಯತ್ ಅಧ್ಯಕ್ಷರಾದ ಎ.ಪಿ. ಪ್ರಸನ್ನ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!