38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಧ್ಯಾಪಕರಿಗೆ ಗುರುವಂದನೆ ಸಲ್ಲಿಸಲಾಯಿತು.

ಶಾಲೆಯ ಆರಂಭದಿಂದ ಅಧ್ಯಾಪಕರುಗಳಾಗಿದ್ದ ವೀರೇಶ್ವರ ವಿ ಫಡಕೆ, ರಾಧಾಕೃಷ್ಣ ಕೆ, ಸುಗುಣ ಎಸ್ ಭಟ್, ಬಾಬುಗೌಡ, ಪದ್ಮನಾಭ ಪಟವರ್ಧನ್, ಕೆ. ರಾಮ ಕಾರಂತ, ಚಂದ್ರಶೇಕರ. ಬಿ , ಶ್ರೀಮತಿ ದೇವಕಿ ಇವರನ್ನು ಗೌರವಿಸಲಾಯಿತು.

ಸಮಾರಂಭದ ವಿಶೇಷ ಅಹ್ವಾನಿತರಾಗಿ ರೊ. ಮಚ್ಚಿಮಲೆ ಅನಂತ ಭಟ್ ಭಾಗವಹಿಸಿದ್ದರು. ವಿವೇಕಾನಂದ ವಿದ್ಯಾಸಂಸ್ಥೆ ಪುತ್ತೂರು ಇಲ್ಲಿನ ಅಧ್ಯಕ್ಷರಾದ ಕಲ್ಲಡ್ಕ ಡಾ| ಪ್ರಭಾಕರ ಭಟ್ ಮಾತನಾಡಿ ಶೈಕ್ಷಣಿಕ ವಿದ್ಯೆಯ ಜೊತೆಗೆ ನೈತಿಕ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಉದ್ದೇಶವಾಗಿದೆ ಎಂದು ತಿಳಿಸಿದರು. ಹಾಗೂ ಹಿರಿಯ ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವ ಈ ಅಭೂತಪೂರ್ವ ಕಾರ್ಯಕ್ರಮದ ಬಗ್ಗೆ ಅಭಿನಂದನೆ ಸಲ್ಲಿಸಿದರು. ಈ ಶಾಲೆ ನಡೆದು ಬಂದ ದಾರಿಯ ಬಗ್ಗೆ ನಿವೃತ್ತ ಶಿಕ್ಷಕ ಕೆ. ರಾಧಾಕೃಷ್ಣರವರು ಮಾತನಾಡಿ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಸಮಾಜದ ಉತ್ತಮ ಪ್ರಜೆಯಾಗಿ ಬಾಳುವುದು ನಮ್ಮೆಲ್ಲರ ಹೊಣೆ ಹಾಗೂ ಈ ಕೆಲಸವನ್ನು ಶಾಲಾ ಅಧ್ಯಾಪಕರುಗಳು ಮಾಡಬೇಕೆಂದು ಸಲಹೆ ನೀಡಿದರು.

ಗುರುವಂದನೆ ಕಾರ್ಯಕ್ರಮದ ಮೂಲಕ ಹಿರಿಯ ವಿದ್ಯಾರ್ಥಿಗಳು ತೋರಿದ ಪ್ರೀತಿಗೆ ನಾವೆಲ್ಲ ಆಭಾರಿಗಳು ಎಂದು ವೀರೇಶ್ವರ ವಿ. ಫಡ್ಕೆ ಹೇಳಿದರು. ಸುಮಾರು 150 ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿ ಸಂಭ್ರಮಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಜೆ ವೆಂಕಟೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು.

ಮುಂಡಾಜೆ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ. ವಿನಯಚಂದ್ರ ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿ ನಾರಾಯಣ ಫಡಕೆ ಮತ್ತು ಜಯರಾಮ. ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya
error: Content is protected !!