31.9 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

ಚಾರ್ಮಾಡಿ ಘಾಟಿಯ 7‌ನೇ ತಿರುವಿನಲ್ಲಿ ಗುರುವಾರ ಬೆಳಿಗ್ಗೆ 9ಗಂಟೆ ಹೊತ್ತಿಗೆ ಕಾಡಾನೆ ವಾಹನ ಸವಾರರಿಗೆ ಕಂಡು ಬಂದಿದೆ.ಸಲಗವು ರಸ್ತೆ ದಾಟುತ್ತಿದ್ದ ಕಾರಣ ಎರಡು ಕಡೆ ಸ್ವಲ್ಪ ಹೊತ್ತು ವಾಹನಗಳು ಸಾಲುಗಟ್ಟಿ ನಿಂತವು. ಈ ವೇಳೆ ವಾಹನ ಸವಾರರು ನಿರಂತರ ಹಾರ್ನ್ ಬಾರಿಸಿ ಕೆಲವರು ಫೋಟೋ ತೆಗೆಯಲು ಮುಂದಾದಾಗ ಆನೆ ಒಂದಿಷ್ಟು ಆಕ್ರೋಶಗೊಂಡ ಘಟನೆ ನಡೆದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಾಟಿ ರಸ್ತೆ ಬದಿ ಒಂಟಿ ಸಲಗ ಕಂಡುಬಂದಿರುವುದು ವಾಹನ ಸವಾರರಲ್ಲಿ ಭೀತಿ ಮೂಡಿಸಿದೆ.ಒಂಟಿ ಸಲಗ ಘಾಟಿ ಪರಿಸರದಲ್ಲಿ ಸಂಚರಿಸುತ್ತಿರುವ ಕುರಿತು ಚಾರ್ಮಾಡಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಗೆ ವಾಹನ ಸವಾರರು ಮಾಹಿತಿ ನೀಡಿದ್ದು ಇಲ್ಲಿನ ಸಿಬ್ಬಂದಿ ಘಾಟಿ ಪ್ರದೇಶಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾಡಾನೆ ಕಂಡು ಬರದಿದ್ದರೂ ಅದು ಸಂಚರಿಸಿದ ಕುರುಹುಗಳು ಕಂಡುಬಂದಿವೆ.

ಎಚ್ಚರಿಕೆ.: ಚಾರ್ಮಾಡಿ ಘಾಟಿ ಪರಿಸರವು ಅರಣ್ಯ ಪ್ರದೇಶದಲ್ಲಿದ್ದು, ಇಲ್ಲಿ ಹಲವಾರು ವನ್ಯಜೀವಿಗಳು ವಾಸಿಸುತ್ತವೆ. ಸಾಮಾನ್ಯವಾಗಿ ರಾತ್ರಿ ವೇಳೆ ರಸ್ತೆಯ ಅಲ್ಲಲ್ಲಿ ಆಗಾಗ ಇವು ವಾಹನ ಸವಾರರಿಗೆ ಕಾಣಿಸಿಗುತ್ತವೆ. ಆದರೆ ಇದೀಗ ಹಗಲಿನ ವೇಳೆ ಕಾಡಾನೆ ರಸ್ತೆಯಲ್ಲಿ ಸಂಚರಿಸುವುದು ಕಂಡುಬಂದಿದೆ. ಈ ಕಾರಣದಿಂದ ವಾಹನ ಸವಾರರು ಹೆಚ್ಚಿನ ಮುಂಜಾಗ್ರತೆಯಿಂದ ಘಾಟಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

Related posts

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
error: Content is protected !!