25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

ಚಾರ್ಮಾಡಿ ಘಾಟಿಯ 7‌ನೇ ತಿರುವಿನಲ್ಲಿ ಗುರುವಾರ ಬೆಳಿಗ್ಗೆ 9ಗಂಟೆ ಹೊತ್ತಿಗೆ ಕಾಡಾನೆ ವಾಹನ ಸವಾರರಿಗೆ ಕಂಡು ಬಂದಿದೆ.ಸಲಗವು ರಸ್ತೆ ದಾಟುತ್ತಿದ್ದ ಕಾರಣ ಎರಡು ಕಡೆ ಸ್ವಲ್ಪ ಹೊತ್ತು ವಾಹನಗಳು ಸಾಲುಗಟ್ಟಿ ನಿಂತವು. ಈ ವೇಳೆ ವಾಹನ ಸವಾರರು ನಿರಂತರ ಹಾರ್ನ್ ಬಾರಿಸಿ ಕೆಲವರು ಫೋಟೋ ತೆಗೆಯಲು ಮುಂದಾದಾಗ ಆನೆ ಒಂದಿಷ್ಟು ಆಕ್ರೋಶಗೊಂಡ ಘಟನೆ ನಡೆದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಾಟಿ ರಸ್ತೆ ಬದಿ ಒಂಟಿ ಸಲಗ ಕಂಡುಬಂದಿರುವುದು ವಾಹನ ಸವಾರರಲ್ಲಿ ಭೀತಿ ಮೂಡಿಸಿದೆ.ಒಂಟಿ ಸಲಗ ಘಾಟಿ ಪರಿಸರದಲ್ಲಿ ಸಂಚರಿಸುತ್ತಿರುವ ಕುರಿತು ಚಾರ್ಮಾಡಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಗೆ ವಾಹನ ಸವಾರರು ಮಾಹಿತಿ ನೀಡಿದ್ದು ಇಲ್ಲಿನ ಸಿಬ್ಬಂದಿ ಘಾಟಿ ಪ್ರದೇಶಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾಡಾನೆ ಕಂಡು ಬರದಿದ್ದರೂ ಅದು ಸಂಚರಿಸಿದ ಕುರುಹುಗಳು ಕಂಡುಬಂದಿವೆ.

ಎಚ್ಚರಿಕೆ.: ಚಾರ್ಮಾಡಿ ಘಾಟಿ ಪರಿಸರವು ಅರಣ್ಯ ಪ್ರದೇಶದಲ್ಲಿದ್ದು, ಇಲ್ಲಿ ಹಲವಾರು ವನ್ಯಜೀವಿಗಳು ವಾಸಿಸುತ್ತವೆ. ಸಾಮಾನ್ಯವಾಗಿ ರಾತ್ರಿ ವೇಳೆ ರಸ್ತೆಯ ಅಲ್ಲಲ್ಲಿ ಆಗಾಗ ಇವು ವಾಹನ ಸವಾರರಿಗೆ ಕಾಣಿಸಿಗುತ್ತವೆ. ಆದರೆ ಇದೀಗ ಹಗಲಿನ ವೇಳೆ ಕಾಡಾನೆ ರಸ್ತೆಯಲ್ಲಿ ಸಂಚರಿಸುವುದು ಕಂಡುಬಂದಿದೆ. ಈ ಕಾರಣದಿಂದ ವಾಹನ ಸವಾರರು ಹೆಚ್ಚಿನ ಮುಂಜಾಗ್ರತೆಯಿಂದ ಘಾಟಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

Related posts

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya
error: Content is protected !!