30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

ಚಾರ್ಮಾಡಿ ಘಾಟಿಯ 7‌ನೇ ತಿರುವಿನಲ್ಲಿ ಗುರುವಾರ ಬೆಳಿಗ್ಗೆ 9ಗಂಟೆ ಹೊತ್ತಿಗೆ ಕಾಡಾನೆ ವಾಹನ ಸವಾರರಿಗೆ ಕಂಡು ಬಂದಿದೆ.ಸಲಗವು ರಸ್ತೆ ದಾಟುತ್ತಿದ್ದ ಕಾರಣ ಎರಡು ಕಡೆ ಸ್ವಲ್ಪ ಹೊತ್ತು ವಾಹನಗಳು ಸಾಲುಗಟ್ಟಿ ನಿಂತವು. ಈ ವೇಳೆ ವಾಹನ ಸವಾರರು ನಿರಂತರ ಹಾರ್ನ್ ಬಾರಿಸಿ ಕೆಲವರು ಫೋಟೋ ತೆಗೆಯಲು ಮುಂದಾದಾಗ ಆನೆ ಒಂದಿಷ್ಟು ಆಕ್ರೋಶಗೊಂಡ ಘಟನೆ ನಡೆದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಾಟಿ ರಸ್ತೆ ಬದಿ ಒಂಟಿ ಸಲಗ ಕಂಡುಬಂದಿರುವುದು ವಾಹನ ಸವಾರರಲ್ಲಿ ಭೀತಿ ಮೂಡಿಸಿದೆ.ಒಂಟಿ ಸಲಗ ಘಾಟಿ ಪರಿಸರದಲ್ಲಿ ಸಂಚರಿಸುತ್ತಿರುವ ಕುರಿತು ಚಾರ್ಮಾಡಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಗೆ ವಾಹನ ಸವಾರರು ಮಾಹಿತಿ ನೀಡಿದ್ದು ಇಲ್ಲಿನ ಸಿಬ್ಬಂದಿ ಘಾಟಿ ಪ್ರದೇಶಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾಡಾನೆ ಕಂಡು ಬರದಿದ್ದರೂ ಅದು ಸಂಚರಿಸಿದ ಕುರುಹುಗಳು ಕಂಡುಬಂದಿವೆ.

ಎಚ್ಚರಿಕೆ.: ಚಾರ್ಮಾಡಿ ಘಾಟಿ ಪರಿಸರವು ಅರಣ್ಯ ಪ್ರದೇಶದಲ್ಲಿದ್ದು, ಇಲ್ಲಿ ಹಲವಾರು ವನ್ಯಜೀವಿಗಳು ವಾಸಿಸುತ್ತವೆ. ಸಾಮಾನ್ಯವಾಗಿ ರಾತ್ರಿ ವೇಳೆ ರಸ್ತೆಯ ಅಲ್ಲಲ್ಲಿ ಆಗಾಗ ಇವು ವಾಹನ ಸವಾರರಿಗೆ ಕಾಣಿಸಿಗುತ್ತವೆ. ಆದರೆ ಇದೀಗ ಹಗಲಿನ ವೇಳೆ ಕಾಡಾನೆ ರಸ್ತೆಯಲ್ಲಿ ಸಂಚರಿಸುವುದು ಕಂಡುಬಂದಿದೆ. ಈ ಕಾರಣದಿಂದ ವಾಹನ ಸವಾರರು ಹೆಚ್ಚಿನ ಮುಂಜಾಗ್ರತೆಯಿಂದ ಘಾಟಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

Related posts

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!