23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

ನಾರಾವಿ: ಇಲ್ಲಿನ ನಾರಾವಿ ಗ್ರಾಮದ ಅರಸುಕಟ್ಟೆ ಹೆಗ್ಡೆ ಪರ್ನಿಚರ್ ಅಂಗಡಿ ಬಳಿ ಬೈಕ್ ಗೂಡ್ಸ್ ಟೆಂಪೋ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಎ. 27 ರಂದು ಸಂಭವಿಸಿದೆ. ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಮೃತಪಟ್ಟವರು.

ಎ. 27 ರಂದು ಸುಮಾರು ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಅರಸುಕಟ್ಟೆ ಹೆಗ್ಡೆ ಪರ್ನಿಚರ್ ಅಂಗಡಿ ಬಳಿ ನಾರಾವಿ- ಗುರುವಾಯನಕೆರೆ ಸಾರ್ವಜನಿಕ ರಸ್ತೆಯಲ್ಲಿ ಬೈಕ್‌ ನಂಬ್ರ ಕೆ ಎ 21 ವಿ 6818 ಅದರ ಸವಾರ ಜೋಕಿ ರೋಡ್ರಿಗಸ್‌ ಎಂಬವರು ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಬರುತ್ತಿದ್ದು, ಒಮ್ಮೆಲೇ ರಸ್ತೆಯ ರಾಂಗ್‌ ಸೈಡಿಗೆ ಚಲಾಯಿಸಿ ನಾರಾವಿ ಕಡೆಯಿಂದ ಬರುತ್ತಿದ್ದ ಖಾಲಿದ್‌ ಕೋರ್ಟ್‌ ರಸ್ತೆ ಸಂಜಯ ನಗರ ಬೆಳ್ತಂಗಡಿ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ407 ಟೆಂಪೋ ಗೂಡ್ಸ್‌ ನಂಬ್ರ (ಕೆಎ 19 ಎ 8872 ) ಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಬೈಕ್‌ ನೊಂದಿಗೆ ರಸ್ತೆಗೆ ಎಸೆಯಲ್ಪಟ್ಟುತಲೆಗೆ, ಬಲ ಕಾಲಿಗೆ, ಎಡ ಕೈಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎನ್ನಲಾಗಿದೆ. ಈ ಬಗ್ಗೆ ವೇಣೂರು ಪೊಲೀಸರು ಠಾಣಾ 24/2023 ಕಲಂ: 279,304(A) IPCಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya
error: Content is protected !!