September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

ಚಾರ್ಮಾಡಿ ಘಾಟಿಯ 7‌ನೇ ತಿರುವಿನಲ್ಲಿ ಗುರುವಾರ ಬೆಳಿಗ್ಗೆ 9ಗಂಟೆ ಹೊತ್ತಿಗೆ ಕಾಡಾನೆ ವಾಹನ ಸವಾರರಿಗೆ ಕಂಡು ಬಂದಿದೆ.ಸಲಗವು ರಸ್ತೆ ದಾಟುತ್ತಿದ್ದ ಕಾರಣ ಎರಡು ಕಡೆ ಸ್ವಲ್ಪ ಹೊತ್ತು ವಾಹನಗಳು ಸಾಲುಗಟ್ಟಿ ನಿಂತವು. ಈ ವೇಳೆ ವಾಹನ ಸವಾರರು ನಿರಂತರ ಹಾರ್ನ್ ಬಾರಿಸಿ ಕೆಲವರು ಫೋಟೋ ತೆಗೆಯಲು ಮುಂದಾದಾಗ ಆನೆ ಒಂದಿಷ್ಟು ಆಕ್ರೋಶಗೊಂಡ ಘಟನೆ ನಡೆದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಾಟಿ ರಸ್ತೆ ಬದಿ ಒಂಟಿ ಸಲಗ ಕಂಡುಬಂದಿರುವುದು ವಾಹನ ಸವಾರರಲ್ಲಿ ಭೀತಿ ಮೂಡಿಸಿದೆ.ಒಂಟಿ ಸಲಗ ಘಾಟಿ ಪರಿಸರದಲ್ಲಿ ಸಂಚರಿಸುತ್ತಿರುವ ಕುರಿತು ಚಾರ್ಮಾಡಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಗೆ ವಾಹನ ಸವಾರರು ಮಾಹಿತಿ ನೀಡಿದ್ದು ಇಲ್ಲಿನ ಸಿಬ್ಬಂದಿ ಘಾಟಿ ಪ್ರದೇಶಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾಡಾನೆ ಕಂಡು ಬರದಿದ್ದರೂ ಅದು ಸಂಚರಿಸಿದ ಕುರುಹುಗಳು ಕಂಡುಬಂದಿವೆ.

ಎಚ್ಚರಿಕೆ.: ಚಾರ್ಮಾಡಿ ಘಾಟಿ ಪರಿಸರವು ಅರಣ್ಯ ಪ್ರದೇಶದಲ್ಲಿದ್ದು, ಇಲ್ಲಿ ಹಲವಾರು ವನ್ಯಜೀವಿಗಳು ವಾಸಿಸುತ್ತವೆ. ಸಾಮಾನ್ಯವಾಗಿ ರಾತ್ರಿ ವೇಳೆ ರಸ್ತೆಯ ಅಲ್ಲಲ್ಲಿ ಆಗಾಗ ಇವು ವಾಹನ ಸವಾರರಿಗೆ ಕಾಣಿಸಿಗುತ್ತವೆ. ಆದರೆ ಇದೀಗ ಹಗಲಿನ ವೇಳೆ ಕಾಡಾನೆ ರಸ್ತೆಯಲ್ಲಿ ಸಂಚರಿಸುವುದು ಕಂಡುಬಂದಿದೆ. ಈ ಕಾರಣದಿಂದ ವಾಹನ ಸವಾರರು ಹೆಚ್ಚಿನ ಮುಂಜಾಗ್ರತೆಯಿಂದ ಘಾಟಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!