March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

ಧರ್ಮಸ್ಥಳ: ಸಂಬಂಧಿಕರಿಗೆ ಗೃಹಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ಚಿಕ್ಕಮಗಳೂರಿಗೆ ಹೋಗಿ ಹಿಂದಿರುಗುವ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿಯ ಶವ ಕೊಟ್ಟಿಗೆ ಹಾರದ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಎ.26 ರಂದು ನಡೆದಿದೆ.

ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40ವ) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ.
ಉಜಿರೆಯಲ್ಲಿ ವಾಸವಿದ್ದ ದಿಲೀಪ್ ರವರು ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದರು.
ಧಮ೯ಸ್ಥಳ ಗ್ರಾಮದ ಕೂಟದ ಕಲ್ಲು ಎಂಬಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು.
ಇದರ ಆಮಂತ್ರಣ ಪತ್ರಿಕೆಯನ್ನು ತಮ್ಮ ಸಂಬಂಧಿಕರಿಗೆ ನೀಡಲು ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಸ್ಕೂಟಿಯಲ್ಲಿ ಉಜಿರೆಗೆ ಹೊರಟ್ಟಿದ್ದರು. ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಲು ಹೇಳಿ ತಾನು ಮಳೆ ನಿಂತ ಮೇಲೆ ಸ್ಕೂಟಿಯಲ್ಲಿ ಬರುವುದಾಗಿ ತಿಳಿಸಿದ್ದಾರೆ.


ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದೆ.
ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಇಲಾಖೆ ಮಾಹಿತಿ ಬಂದು ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.


ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಸ್ಕೂಟಿ ಪತ್ತೆ:
ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಗೃಹಪ್ರವೇಶ ಮೇ 5 ರಂದು ಹಮ್ಮಿಕೊಂಡಿದ್ದು ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದವರು ಹಿಂದಿರುಗುವ ವೇಳೆ ಈ ಘಟನೆ ನಡೆದಿದ್ದು,. ಅಪಘಾತ ನಡೆದ ಜಾಗಕಿಂತ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

Related posts

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!