22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

ಧರ್ಮಸ್ಥಳ: ಸಂಬಂಧಿಕರಿಗೆ ಗೃಹಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ಚಿಕ್ಕಮಗಳೂರಿಗೆ ಹೋಗಿ ಹಿಂದಿರುಗುವ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿಯ ಶವ ಕೊಟ್ಟಿಗೆ ಹಾರದ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಎ.26 ರಂದು ನಡೆದಿದೆ.

ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40ವ) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ.
ಉಜಿರೆಯಲ್ಲಿ ವಾಸವಿದ್ದ ದಿಲೀಪ್ ರವರು ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದರು.
ಧಮ೯ಸ್ಥಳ ಗ್ರಾಮದ ಕೂಟದ ಕಲ್ಲು ಎಂಬಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು.
ಇದರ ಆಮಂತ್ರಣ ಪತ್ರಿಕೆಯನ್ನು ತಮ್ಮ ಸಂಬಂಧಿಕರಿಗೆ ನೀಡಲು ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಸ್ಕೂಟಿಯಲ್ಲಿ ಉಜಿರೆಗೆ ಹೊರಟ್ಟಿದ್ದರು. ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಲು ಹೇಳಿ ತಾನು ಮಳೆ ನಿಂತ ಮೇಲೆ ಸ್ಕೂಟಿಯಲ್ಲಿ ಬರುವುದಾಗಿ ತಿಳಿಸಿದ್ದಾರೆ.


ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದೆ.
ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಇಲಾಖೆ ಮಾಹಿತಿ ಬಂದು ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.


ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಸ್ಕೂಟಿ ಪತ್ತೆ:
ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಗೃಹಪ್ರವೇಶ ಮೇ 5 ರಂದು ಹಮ್ಮಿಕೊಂಡಿದ್ದು ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದವರು ಹಿಂದಿರುಗುವ ವೇಳೆ ಈ ಘಟನೆ ನಡೆದಿದ್ದು,. ಅಪಘಾತ ನಡೆದ ಜಾಗಕಿಂತ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya
error: Content is protected !!