27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

ಗುರುವಾಯನಕೆರೆಯ ಸರಕಾರಿ ಪ್ರೌಢ ಶಾಲಾ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಇಬ್ಬರು ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಪಡೆದುಕೊಂಡ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಹರೀಶ್ ಎಮ್. ಆರ್ ರವರು ಸಿಬ್ಬಂದಿಗಳ ಜೊತೆ ವಿಧಾನ ಸಭಾ ಚುನಾವಣಾ ಕರ್ತವ್ಯದ ಎಫ್. ಟಿ. ಎಸ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಬರಮಾಡಿಕೊಂಡು ಅವರನ್ನು ಇಲಾಖಾ ಜೀಪಿನಲ್ಲಿ ಕುಳ್ಳಿರಿಸಿಕೊಂಡು ಸ್ಥಳಕ್ಕೆ ದಾಳಿ ನಡೆಸಿದಾಗ, ಇಬ್ಬರು ವ್ಯಕ್ತಿಗಳು ಪೊಲೀಸ್ ಜೀಪನ್ನು ಕಂಡು ಕೈಯಲ್ಲಿದ್ದ ಪ್ಲಾಸ್ಟಿಕ್ ಜಿಪ್ ಕವರಿನ ಕಟ್ಟನ್ನು ಸ್ಥಳದಲ್ಲೇ ಎಸೆದು ಪರಾರಿಯಾದರೆನ್ನಲಾಗಿದೆ.

ಆರೋಪಿಗಳನ್ನು ಹಿಡಿಯಲು ಪೊಲೀಸರು ಬೆನ್ನಟ್ಟಿದಾಗ ಮಹಮ್ಮದ್ ಖೈಸ್ ಓಡುವ ಯತ್ನದಲ್ಲಿ ಕಾಂಕ್ರೀಟ್ ರಸ್ತೆಯಲ್ಲಿ ಜಾರಿ ಬಿದ್ದು ತಲೆಗೆ ಗಾಯಗೊಂಡನೆನ್ನಲಾಗಿದೆ. ಆತನನ್ನು ಹಿಡಿದು ವಿಚಾರಿಸಿ, ಸ್ಥಳದಲ್ಲಿ ಬಿಸಾಡಿದ ಪ್ಲಾಸ್ಟಿಕ್ ಜಿಪ್ ಕವರಲ್ಲಿದ್ದ ವಸ್ತುವನ್ನು ತೆರೆದು ನೋಡಲಾಗಿ ಅದರಲ್ಲಿ ಗಾಂಜಾದ ಹೂ, ಮೊಗ್ಗುಗಳು, ಬೀಜಗಳು ಇರುವುದು ಪತ್ತೆಯಾಯಿತು. ಸುಮಾರು ರೂ. 10 ಸಾವಿರ ಮೌಲ್ಯದ 294 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಮೊಹಮ್ಮದ್ ಅಶ್ರಫ್‌ನನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿ ಮಹಮ್ಮದ್ ಖೈಸ್‌ನನ್ನು ಸಿಬ್ಬದಿ ಭದ್ರಿಕೆಯಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 34/2023 ಕಲಂ; 8(ಸಿ),20 (ಬಿ) ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

Related posts

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya
error: Content is protected !!