23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

ಗುರುವಾಯನಕೆರೆಯ ಸರಕಾರಿ ಪ್ರೌಢ ಶಾಲಾ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಇಬ್ಬರು ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಪಡೆದುಕೊಂಡ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಹರೀಶ್ ಎಮ್. ಆರ್ ರವರು ಸಿಬ್ಬಂದಿಗಳ ಜೊತೆ ವಿಧಾನ ಸಭಾ ಚುನಾವಣಾ ಕರ್ತವ್ಯದ ಎಫ್. ಟಿ. ಎಸ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಬರಮಾಡಿಕೊಂಡು ಅವರನ್ನು ಇಲಾಖಾ ಜೀಪಿನಲ್ಲಿ ಕುಳ್ಳಿರಿಸಿಕೊಂಡು ಸ್ಥಳಕ್ಕೆ ದಾಳಿ ನಡೆಸಿದಾಗ, ಇಬ್ಬರು ವ್ಯಕ್ತಿಗಳು ಪೊಲೀಸ್ ಜೀಪನ್ನು ಕಂಡು ಕೈಯಲ್ಲಿದ್ದ ಪ್ಲಾಸ್ಟಿಕ್ ಜಿಪ್ ಕವರಿನ ಕಟ್ಟನ್ನು ಸ್ಥಳದಲ್ಲೇ ಎಸೆದು ಪರಾರಿಯಾದರೆನ್ನಲಾಗಿದೆ.

ಆರೋಪಿಗಳನ್ನು ಹಿಡಿಯಲು ಪೊಲೀಸರು ಬೆನ್ನಟ್ಟಿದಾಗ ಮಹಮ್ಮದ್ ಖೈಸ್ ಓಡುವ ಯತ್ನದಲ್ಲಿ ಕಾಂಕ್ರೀಟ್ ರಸ್ತೆಯಲ್ಲಿ ಜಾರಿ ಬಿದ್ದು ತಲೆಗೆ ಗಾಯಗೊಂಡನೆನ್ನಲಾಗಿದೆ. ಆತನನ್ನು ಹಿಡಿದು ವಿಚಾರಿಸಿ, ಸ್ಥಳದಲ್ಲಿ ಬಿಸಾಡಿದ ಪ್ಲಾಸ್ಟಿಕ್ ಜಿಪ್ ಕವರಲ್ಲಿದ್ದ ವಸ್ತುವನ್ನು ತೆರೆದು ನೋಡಲಾಗಿ ಅದರಲ್ಲಿ ಗಾಂಜಾದ ಹೂ, ಮೊಗ್ಗುಗಳು, ಬೀಜಗಳು ಇರುವುದು ಪತ್ತೆಯಾಯಿತು. ಸುಮಾರು ರೂ. 10 ಸಾವಿರ ಮೌಲ್ಯದ 294 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಮೊಹಮ್ಮದ್ ಅಶ್ರಫ್‌ನನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿ ಮಹಮ್ಮದ್ ಖೈಸ್‌ನನ್ನು ಸಿಬ್ಬದಿ ಭದ್ರಿಕೆಯಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 34/2023 ಕಲಂ; 8(ಸಿ),20 (ಬಿ) ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

Related posts

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya
error: Content is protected !!