July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

ನಾರಾವಿ: ಇಲ್ಲಿನ ನಾರಾವಿ ಗ್ರಾಮದ ಅರಸುಕಟ್ಟೆ ಹೆಗ್ಡೆ ಪರ್ನಿಚರ್ ಅಂಗಡಿ ಬಳಿ ಬೈಕ್ ಗೂಡ್ಸ್ ಟೆಂಪೋ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಎ. 27 ರಂದು ಸಂಭವಿಸಿದೆ. ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಮೃತಪಟ್ಟವರು.

ಎ. 27 ರಂದು ಸುಮಾರು ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಅರಸುಕಟ್ಟೆ ಹೆಗ್ಡೆ ಪರ್ನಿಚರ್ ಅಂಗಡಿ ಬಳಿ ನಾರಾವಿ- ಗುರುವಾಯನಕೆರೆ ಸಾರ್ವಜನಿಕ ರಸ್ತೆಯಲ್ಲಿ ಬೈಕ್‌ ನಂಬ್ರ ಕೆ ಎ 21 ವಿ 6818 ಅದರ ಸವಾರ ಜೋಕಿ ರೋಡ್ರಿಗಸ್‌ ಎಂಬವರು ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಬರುತ್ತಿದ್ದು, ಒಮ್ಮೆಲೇ ರಸ್ತೆಯ ರಾಂಗ್‌ ಸೈಡಿಗೆ ಚಲಾಯಿಸಿ ನಾರಾವಿ ಕಡೆಯಿಂದ ಬರುತ್ತಿದ್ದ ಖಾಲಿದ್‌ ಕೋರ್ಟ್‌ ರಸ್ತೆ ಸಂಜಯ ನಗರ ಬೆಳ್ತಂಗಡಿ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ407 ಟೆಂಪೋ ಗೂಡ್ಸ್‌ ನಂಬ್ರ (ಕೆಎ 19 ಎ 8872 ) ಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಬೈಕ್‌ ನೊಂದಿಗೆ ರಸ್ತೆಗೆ ಎಸೆಯಲ್ಪಟ್ಟುತಲೆಗೆ, ಬಲ ಕಾಲಿಗೆ, ಎಡ ಕೈಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎನ್ನಲಾಗಿದೆ. ಈ ಬಗ್ಗೆ ವೇಣೂರು ಪೊಲೀಸರು ಠಾಣಾ 24/2023 ಕಲಂ: 279,304(A) IPCಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!