ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

Updated on:

ಬೆಳ್ತಂಗಡಿ: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಯಲ್ಲಿ ಮೀನು ಹಿಡಿಯಲು ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದು,ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪಿದೆ.
ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ವಿಷ ಹಾಕಿ ಮೀನು ಹಿಡಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿದೆ.

ನೀರು ಸರಬರಾಜು ಸ್ಥಗಿತ:
ಸಾವಿರಾರು ಮೀನುಗಳ ಸಾವಿನಿಂದ ನಗರಕ್ಕೆ ನೀರು ಸರಬರಾಜು ರದ್ದುಗೊಳಿಸಲಾಗಿದೆ. ಟ್ಯಾಂಕ್ ನ ನೀರು ಖಾಲಿ ಮಾಡಿ ‌ಸ್ವಚ್ಚಗೊಳಿಸಿ, ನಾಳೆಯಿಂದ ನಗರಕ್ಕೆ ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡುವುದಾಗಿ ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದ್ದಾರೆ.

Leave a Comment

error: Content is protected !!