24.2 C
ಪುತ್ತೂರು, ಬೆಳ್ತಂಗಡಿ
April 12, 2025
ವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

ಉಜಿರೆ :ನಿಸ್ವಾರ್ಥ ಸೇವೆಯಿಂದ ವೈದ್ಯ ವೃತ್ತಿಯ ಗೌರವ ಹೆಚ್ಚಿಸಿದವರು ಡಾ. ನಾರಾಯಣ ಪ್ರಭು. ಇವರು ಹಳ್ಳಿಯ ಅನಾನೂಕುಲ ಪರಿಶ್ಥಿಯಲ್ಲಿಯೂ ಸಂಚಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಬಡ ಜನತೆಯ ಆರೋಗ್ಯ ಕಾಪಾಡಿದವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಚತುರ್ದಾನಗಳಲ್ಲಿ ಒಂದಾದ ಔಷಧ ದಾನವನ್ನು ಸಮರ್ಪಕವಾಗಿ ಜನತೆಗೆ ಮುಟ್ಟಿಸಲು ಶ್ರಮಿಸಿದವರು ಎಂದು ಎಂ. ಜನಾರ್ದನ್ ಹೇಳಿದರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಾ ಅವರು ಮಾತನಾಡಿದರು. ಮತ್ತೋರ್ವ ಹಿರಿಯ ವೈದ್ಯರಾದ ಡಾ. ಬಾಲಕೃಷ್ಣ ಭಟ್ ಅವರು ಡಾ. ನಾರಾಯಣ ಪ್ರಭು ಅವರ ಅನುಪಸ್ಥಿಯಲ್ಲಿ ತಾನು ಸಂಚಾರಿ ಆಸ್ಪತ್ರೆಯ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹಂಚಿಕೊಂಡರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್. ಪಿ, ಫಿಸಿಷಿಯನ್ ಡಾ. ಸಾತ್ವಿಕ್ ಜೈನ್, ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
ವರದಿ: ನಾರಾಯಣ. ಬಿ

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya
error: Content is protected !!