September 6, 2026
ವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

ಉಜಿರೆ :ನಿಸ್ವಾರ್ಥ ಸೇವೆಯಿಂದ ವೈದ್ಯ ವೃತ್ತಿಯ ಗೌರವ ಹೆಚ್ಚಿಸಿದವರು ಡಾ. ನಾರಾಯಣ ಪ್ರಭು. ಇವರು ಹಳ್ಳಿಯ ಅನಾನೂಕುಲ ಪರಿಶ್ಥಿಯಲ್ಲಿಯೂ ಸಂಚಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಬಡ ಜನತೆಯ ಆರೋಗ್ಯ ಕಾಪಾಡಿದವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಚತುರ್ದಾನಗಳಲ್ಲಿ ಒಂದಾದ ಔಷಧ ದಾನವನ್ನು ಸಮರ್ಪಕವಾಗಿ ಜನತೆಗೆ ಮುಟ್ಟಿಸಲು ಶ್ರಮಿಸಿದವರು ಎಂದು ಎಂ. ಜನಾರ್ದನ್ ಹೇಳಿದರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಾ ಅವರು ಮಾತನಾಡಿದರು. ಮತ್ತೋರ್ವ ಹಿರಿಯ ವೈದ್ಯರಾದ ಡಾ. ಬಾಲಕೃಷ್ಣ ಭಟ್ ಅವರು ಡಾ. ನಾರಾಯಣ ಪ್ರಭು ಅವರ ಅನುಪಸ್ಥಿಯಲ್ಲಿ ತಾನು ಸಂಚಾರಿ ಆಸ್ಪತ್ರೆಯ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹಂಚಿಕೊಂಡರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್. ಪಿ, ಫಿಸಿಷಿಯನ್ ಡಾ. ಸಾತ್ವಿಕ್ ಜೈನ್, ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
ವರದಿ: ನಾರಾಯಣ. ಬಿ

Related posts

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya
error: Content is protected !!