22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

ಉಜಿರೆ :ನಿಸ್ವಾರ್ಥ ಸೇವೆಯಿಂದ ವೈದ್ಯ ವೃತ್ತಿಯ ಗೌರವ ಹೆಚ್ಚಿಸಿದವರು ಡಾ. ನಾರಾಯಣ ಪ್ರಭು. ಇವರು ಹಳ್ಳಿಯ ಅನಾನೂಕುಲ ಪರಿಶ್ಥಿಯಲ್ಲಿಯೂ ಸಂಚಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಬಡ ಜನತೆಯ ಆರೋಗ್ಯ ಕಾಪಾಡಿದವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಚತುರ್ದಾನಗಳಲ್ಲಿ ಒಂದಾದ ಔಷಧ ದಾನವನ್ನು ಸಮರ್ಪಕವಾಗಿ ಜನತೆಗೆ ಮುಟ್ಟಿಸಲು ಶ್ರಮಿಸಿದವರು ಎಂದು ಎಂ. ಜನಾರ್ದನ್ ಹೇಳಿದರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಾ ಅವರು ಮಾತನಾಡಿದರು. ಮತ್ತೋರ್ವ ಹಿರಿಯ ವೈದ್ಯರಾದ ಡಾ. ಬಾಲಕೃಷ್ಣ ಭಟ್ ಅವರು ಡಾ. ನಾರಾಯಣ ಪ್ರಭು ಅವರ ಅನುಪಸ್ಥಿಯಲ್ಲಿ ತಾನು ಸಂಚಾರಿ ಆಸ್ಪತ್ರೆಯ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹಂಚಿಕೊಂಡರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್. ಪಿ, ಫಿಸಿಷಿಯನ್ ಡಾ. ಸಾತ್ವಿಕ್ ಜೈನ್, ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
ವರದಿ: ನಾರಾಯಣ. ಬಿ

Related posts

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!