23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣಪ್ಪ ಮತ್ತು ಪ್ರವೀಣ್ ಶೆಟ್ಟಿ ಆಯ್ಕೆಯಾದರು. ನಂತರ ಜನಜಾಗೃತಿ ಮೂಲಕ ಆಯೋಜನೆಯಾಗುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಯೋಜನಾಧಿಕಾರಿಯಾದ ಯಶವಂತ ಎಸ್ ರು ಜನಜಾಗೃತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ವಲಯದ ಜನಜಾಗೃತಿ ಅಧ್ಯಕ್ಷ ಅಬ್ದುಲ್ ರಹಿಮನ್ ಪಡ್ಪು , ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪುಷ್ಪರಾಜು ಜೈನ್, ಪದ್ಮನಾಭ ಸಾಲ್ಯಾನ್, ಪದ್ಮನಾಭ ಅಟಾಲ, ಶಿಬಿರಾಧಿಕಾರಿ ದಿನೇಶ್, , ಮತ್ತು ಗ್ರಾಮ ಸಮಿತಿ ಅಧ್ಯಕ್ಷರುಗಳು, ಒಕ್ಕೂಟದ ಅಧ್ಯಕ್ಷರು, ನವಜೀವನ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ವಸಂತಕುಮಾರ್ ನಿರೂಪಿಸಿ, ಪಾರೆಂಕಿ ಗ್ರಾಮದ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ ರವರು ಸ್ವಾಗತಿಸಿದ್ದರು. ಕುಕ್ಕಳ ಸೇವಾ ಪ್ರತಿನಿಧಿ ಸತೀಶ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya
error: Content is protected !!