37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಪುಂಜಾಲಕಟ್ಟೆ :ಪುಂಜಾಲಕಟ್ಟೆ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಸಂದೀಪ್ ಲೋಬೊ ಮೃತಪಟ್ಟ ಯುವಕ

ಅಮ್ಮಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀ ವೇಗದಲ್ಲಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya
error: Content is protected !!