24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಹೊಯ್ಸಳ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ, ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 17 ರಿಂದ 22 ರವರಗೆ ನಿಲೇಶ್ವರ ಆಲಂಬಾಡಿ ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎ 28 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು,

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಜೈನ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಈಶ್ವರ ಗೌಡ ಪಿ ಎಚ್, ಆರ್ಥಿಕ ಸಮಿತಿಯ ಸಂಚಾಲಕ ದಿನೇಶ್ ಗೌಡ ದೆವಸ್ಯ, ಜೀರ್ಣೊದ್ದಾರ ಸಮಿತಿಯ ಅಧ್ಯಕ್ಷ ನಾರಾಯಣ ಗೌಡ ಬರೆಮೇಲು, ಕಾರ್ಯದರ್ಶಿ ಲೋಕೆಶ್ ಶೆಟ್ಟಿ ಮೂರ್ಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮೋಹನ್ ಗೌಡ ಬಾರೆ, ಸೀತಾರಾಮ ಸಾಲ್ಯಾನ್ ಕಜೆ, ಮುದರ ಕುಲಾಲ್ ದೊರ್ತಡಿ, ಶ್ರೀಮತಿ ಮೋಹಿನಿ ಓಬಯ್ಯ ಗೌಡ ಬೆಂದ್ರಾಳ ಹಾಗೂ ಬ್ರಹ್ಮಕಲಶೋತ್ಸವ ವಿವಿಧ ಸಮಿತಿಗಳ ಸಂಚಾಲಕರುಗಳಾದ ಕೀರ್ತನ್ ಶೆಟ್ಟಿ ಮೂರ್ಜೆ, ಶ್ರೀನಿವಾಸ ಗೌಡ ಮಡಿಯೂರು, ರಾಜೇಶ್ ಮೂರ್ಜೆ, ಶಾಜಿಮೋಹನ್ ಮೂರ್ಜೆ, ಅಕ್ಷಯ್ ಮೂರ್ಜೆ,ರಕ್ಷೀತ್ ಮೂರ್ಜೆ,ಶ್ರೀಮತಿ ನಳಿನಾಕ್ಷೀ ವಸಂತ್ ಕಜೆ, ಶ್ರೀಮತಿ ಉಷಾ ಡಿ ಮಜಲು, ಗ್ರಾ ಪಂ ಸದಸ್ಯರಾದ ಶ್ರೀಮತಿ ಸವಿತಾ, ಬೈಲಂಗಡಿ ಬಸದಿಯ ಅರ್ಚಕ ಮಿತ್ರಸೇನ ಇಂದ್ರ ಮೊದಲಾದವರಿದ್ದರು.

Related posts

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya
error: Content is protected !!