22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

ಬೆಳ್ತಂಗಡಿ: ಚುನಾವಣೆ ಹಿನ್ನೆಲೆಯಲ್ಲಿ ಮುಂಡಾಜೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎ.29ರಂದು ವಾಹನಗಳ ವಿಶೇಷ ತಪಾಸಣೆ ನಡೆಸಲಾಯಿತು.
ಮುಂಡಾಜೆಯ ಭಿಡೆ ಕ್ರಾಸ್ ಬಳಿ ‘ಸರ್ಪ್ರೈಸ್ ಚೆಕ್ಕಿಂಗ್’ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಲ್ಲಿ ಸಂಚರಿಸುವವರ ಮಾಹಿತಿ ವಿವರ ಸಂಗ್ರಹಿಸುವುದರ ಜತೆ ಪ್ರಯಾಣಿಕರ ಸೊತ್ತುಗಳನ್ನು ತಪಾಸಣೆಯನ್ನು ಅರೆಸೇನಾ ಪಡೆಯ ಸಹಕಾರದಲ್ಲಿ ನಡೆಸಿದರು.


ತಾಲೂಕಿನ ಚಾರ್ಮಾಡಿ, ಕೊಕ್ಕಡ, ಪುಂಜಾಲಕಟ್ಟೆ,ನಾರಾವಿ ಮೊದಲಾದ ಕಡೆಗಳಲ್ಲಿ ಚುನಾವಣಾ ಹಿನ್ನೆಲೆಯಲ್ಲಿ ಈಗಾಗಲೇ ಚೆಕ್ ಪೋಸ್ಟ್ ಗಳು ಕಾರ್ಯನಿರ್ವಹಿಸುತ್ತಿದ್ದು, ವಾರಾಂತ್ಯ ಚುನಾವಣೆ ದಿನಾಂಕ ಸಮೀಪಿಸುತ್ತಿರುವ ಕಾರಣದಿಂದ ಈ ಬಿಗು ಕಾರ್ಯಾಚರಣೆ ನಡೆದಿದೆ. ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಪರೀತ ವಾಹನ ದಟ್ಟಣೆ ಇದ್ದು ಪೊಲೀಸರು ಪ್ರತಿ ವಾಹನವನ್ನು ತಪಾಸಣೆ ನಡೆಸಿದ ಬಳಿಕವೇ ಸಂಚರಿಸಲು ಅವಕಾಶ ನೀಡಲಾಯಿತು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya
error: Content is protected !!