ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ , ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಸಮಾರಂಭವು ಎ.30ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮುಂಭಾಗದಿಂದ ದಿಬ್ಬಣದ ಮೆರವಣಿಗೆ ಹೊರಡುವುದು. ನಂತರ ಬೆಳಿಗ್ಗೆ 10 ಕ್ಕೆ ಅಂಗನವಾಡಿ ಕಾರ್ಯಕರ್ತರಿಗೆ, ಆಸ್ಪತ್ರೆ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಸಮಾರಂಭ, ಮಧ್ಯಾಹ್ನ 12 ಕ್ಕೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನವು ದ.ಕ ಜಿ.ಪಂ. ಮಾಜಿ ಉಪಾಧ್ಯಕ್ಷ ಯಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ಮುಂಬಯಿ ಉದ್ಯಮಿ ಸುಂದರ್ ರಾಜ್ ಹೆಗ್ಡೆಇವರ ಸಾರಥ್ಯದಲ್ಲಿ ಪ್ರಶಾಂತ್ ಪುಂಜಾಲಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮಧ್ಯಾಹ್ನ ಪೆರ್ಡೂರು ಮೇಳದವರಿಂದ ಕುಶ ಲವ ಯಕ್ಷಗಾನ ಪ್ರದರ್ಶನ, ಸಂಜೆ ಪಿಲಿಬೇಟೆ ಕಿರು ಚಿತ್ರ ಪ್ರದರ್ಶನ, ರಾತ್ರಿ ತಾಂಬೂಲ ಕಲಾವಿದೆರ್ ಇವರಿಂದ ಪರಿಮಳ ಕಾಲನಿ ನಾಟಕ ಪ್ರದರ್ಶನ ನಡೆಯಲಿದೆ.

Leave a Comment

error: Content is protected !!