23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 39 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ 15 ನೇ ವರ್ಷದ ಸಾಮೂಹಿಕ ವಿವಾಹದ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು.

ಕಟ್ಟೆ ಮನೆಯ ಉದಯ ಕುಮಾರ್ ಮತ್ತು ಸಹೋದರರು ದೀಪ ಬೆಳಗಿಸಿದರು. ವದು ವರರ ಡಿಬ್ಬಣ ಮೆರವಣಿಗೆಗೆ ಸುದರ್ಶನ್ ಬಜೆ,ಹರೀಂದ್ರ ಪೈ ನೈನಾಡು,ಲಕ್ಷ್ಮಿ ನಾರಾಯಣ ಉಡುಪ ಪುಂಜಾಲಕಟ್ಟೆ,ಪುನೀತ್ ಕುಮಾರ್ ಮಡಂತ್ಯಾರು, ಕರುಣಾಕರ ಪೂಜಾರಿ ಮಾಳಿಗೆ ಮನೆ,ಲಕ್ಷ್ಮೀ ನಾರಾಯಣ ಹೆಗ್ಡೆ ಪುಂಜಾಲಕಟ್ಟೆ, ಹರೀಶ್ ಪ್ರಭು ಕಜೆಕಾರು,ರಮೇಶ್ ಶೆಟ್ಟಿ ಮಜಲೋಡಿ ಚಾಲನೆ ನೀಡಿದರು.

ಸಾಮೂಹಿಕ ವಿವಾಹದಲ್ಲಿ 11 ಜೋಡಿ ನವವಧುವರರು ಹಸೆಮಣೆಯನ್ನೇರಿ ಗೃಹಸ್ಥಾಶ್ರಮದ ದೀಕ್ಷೆಯನ್ನು ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಸ್ಥಾಪಕಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಕ್ಲಬ್ ನ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ,ಗೌರಾವಾಧ್ಯಕ್ಷ ಅಬ್ದುಲ್ಲಾ ಪಿ,ಕಾರ್ಯದರ್ಶಿ ಜಯರಾಜ್ ಅತ್ತಾಜೆ,ಸಂಚಾಲಕ ರಾಜೇಶ್ ಪಿ.ಪುಂಜಾಲಕಟ್ಟೆ, ಪ್ರೊಫೆಸರ್ ರಂಜಿತ್ ಹೆಚ್‌ಡಿ ಸುಧಾಮ ಬಳಂಜ, ಉಪಸ್ಥಿತರಿದ್ದರು.

ಕ್ಲಬ್ ನ ಪದಾಧಿಕಾರಿಗಳು ಸಹಕರಿಸಿದರು.

ಕಾರ್ಯಕ್ರಮದ ಅಂಗವಾಗಿ ಎ. 29 ರಂದು ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು,ಎ.30 ರಂದು ಬೆಳಿಗ್ಗೆ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮುಂಬಾಗದಿಂದ ಡಿಬ್ಬಣದ ಮೆರವಣಿಗೆ ಹೊರಟು.ಮಧ್ಯಾಹ್ನ ಪೆರ್ಡೂರು ಮೇಳದವರಿಂದ ಕುಶ ಲವ ಯಕ್ಷಗಾನ ಪ್ರದರ್ಶನ, ಸಂಜೆ ಪಿಲಿಬೇಟೆ ಕಿರು ಚಿತ್ರ ಪ್ರದರ್ಶನ,’ರಾತ್ರಿ ತಾಂಬೂಲ ಕಲಾವಿದೆರ್ ಇವರಿಂದ ಪರಿಮಳ ಕಾಲನಿ ನಾಟಕ ಪ್ರದರ್ಶನ ನಡೆಯಲಿದೆ.

Related posts

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya
error: Content is protected !!