July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

ವೇಣೂರು:ಮೋಟಾರು ಸೈಕಲ್ ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ತಡೆದು ನಿಲ್ಲಿಸಿ ವಿಚಾರಿಸಿದಾಗ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವ ಪ್ರಕರಣ ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ಅವರ ನೇತೃತ್ವದಲ್ಲಿ ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಗ್ರಾಮದ ಹಂದೆವು ಮೂರು ಮಾರ್ಗದ ಬಳಿ ವಾಹನ ತಪಾಸಣೆ ಮಾಡುತ್ತಿದ್ದಾಗ ಸಂಶಯಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸಿತ್ತಿರುವುದು ಕಂಡು ಬಂದಿದೆ.ಆರೋಪಿಯನ್ನು ಬಂಧಿಸಿ ಸುಮಾರು ರೂ 37 ಸಾವಿರದ 500 ಗ್ರಾಂ ಗಾಂಜಾ ಹಾಗೂ ಮೋಟಾರು ಸೈಕಲ್ ನ್ನು ವಶಪಡಿಸಲಾಗಿದ್ದು ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ಕಡಬ ತಾಲೂಕಿನ ಸವಣೂರು ಗ್ರಾಮದ ಪ್ರಸಾದ್ ಯಾನೆ ಪಚ್ಚು ಎಂದು ಗುರುತಿಸಲಾಗಿದೆಅರೋಪಿಯು ರೌಡಿ ಶೀಟರ್ ಆಗಿದ್ದು ಅವನ ವಿರುದ್ದ ಪುತ್ತೂರು,ಕಡಬ ಉಪ್ಪಿನಂಗಡಿ ಠಾಣೆಗಳಲ್ಲಿ ಕಳ್ಳತನ ,ಹೊಡೆದಾಟ ಪ್ರಕರಣಗಳು ದಾಖಲಾಗಿವೆ. ಕಾರ್ಯಾರಣೆಯಲ್ಲಿ ಪೋಲಿಸ್ ವೃತ್ತ ನಿರೀಕ್ಷಕರ ಜೊತೆ ಸಿಬ್ಬಂದಿಗಳಾದ ಇಬ್ರಾಹಿಂ,ಅಭಿಜಿತ್ ಕುಮಾರ್,ವಿಜಯ್ ಕುಮಾರ್,ಚೌಡಪ್ಪ, ಚಾಲಕ ಚಿದಾನಂದ ಇದ್ದರು.

Related posts

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!