24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

ಗಡಾ೯ಡಿ : ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಷಾಷಾಣ ವಿಷ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ(60 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಎ.30 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚಾಲಕ ವೃತ್ತಿಯನ್ನು ಮಾಡಿಕೊಂಡಿದ್ದ‌ ಇವರು ಸುಮಾರು ಒಂದು ವರ್ಷದಿಂದ ಚಾಲಕ ವೃತ್ತಿಯನ್ನು ಬಿಟ್ಟು ಮನೆಯ ಸಮೀಪದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಅಮಲು ಪದಾರ್ಥ ಸೇವನೆ ಮಾಡುವ ಚಟವನ್ನು ಹೊಂದಿದ್ದ ಇವರು ಹಣದ ಕೊರತೆಯಿಂದಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಎ.22 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಯಲ್ಲಿ ತಂದಿಟ್ಟಿದ್ದ ಇಲಿ‌ ಪಾಷಾಣ ವಿಷವನ್ನು ಸೇವಿಸಿದ್ದರು. ಕೂಡಲೇ ಅವರನ್ನು ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಎ.30 ರಂದು ಬೆಳಿಗ್ಗೆ ನಿಧನರಾದರು.ಪುತ್ರ ಸಂದೀಪ್‌ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya
error: Content is protected !!