25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

ಗಡಾ೯ಡಿ : ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಷಾಷಾಣ ವಿಷ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ(60 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಎ.30 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚಾಲಕ ವೃತ್ತಿಯನ್ನು ಮಾಡಿಕೊಂಡಿದ್ದ‌ ಇವರು ಸುಮಾರು ಒಂದು ವರ್ಷದಿಂದ ಚಾಲಕ ವೃತ್ತಿಯನ್ನು ಬಿಟ್ಟು ಮನೆಯ ಸಮೀಪದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಅಮಲು ಪದಾರ್ಥ ಸೇವನೆ ಮಾಡುವ ಚಟವನ್ನು ಹೊಂದಿದ್ದ ಇವರು ಹಣದ ಕೊರತೆಯಿಂದಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಎ.22 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಯಲ್ಲಿ ತಂದಿಟ್ಟಿದ್ದ ಇಲಿ‌ ಪಾಷಾಣ ವಿಷವನ್ನು ಸೇವಿಸಿದ್ದರು. ಕೂಡಲೇ ಅವರನ್ನು ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಎ.30 ರಂದು ಬೆಳಿಗ್ಗೆ ನಿಧನರಾದರು.ಪುತ್ರ ಸಂದೀಪ್‌ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya
error: Content is protected !!