23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಮತ್ತು ಎಸ್.ಡಿ.ಎಂ. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿಧ್ಯಾರ್ಥಿಗಳ ಸಹಯೋಗದೊಂದಿಗೆ, ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ ಅಂಗವಾಗಿ ಉಜಿರೆಯ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಯೋಗೀಶ್ ಹೆಚ್.ಆರ್. ಇವರು ಧ್ವಜಾರೋಹಣ ನೆರವೇರಿಸಿದರು.

ನಂತರ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು ಕಾಲೇಜ್ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಸುರೇಶ್ ಕುಮಾರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ತಾಲೂಕು ಮಟ್ಟದ ಅಧಿಕಾರಿಗಳು, ಸೆಕ್ಟರ್ ಆಫೀಸರ್, ತಾಲೂಕು ಪಂಚಾಯತ್ ಸಿಬ್ಬಂದಿಗಳು ಮತ್ತು ಉಜಿರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು, ಬೂತ್ ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!