25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 39 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ 15 ನೇ ವರ್ಷದ ಸಾಮೂಹಿಕ ವಿವಾಹದ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು.

ಕಟ್ಟೆ ಮನೆಯ ಉದಯ ಕುಮಾರ್ ಮತ್ತು ಸಹೋದರರು ದೀಪ ಬೆಳಗಿಸಿದರು. ವದು ವರರ ಡಿಬ್ಬಣ ಮೆರವಣಿಗೆಗೆ ಸುದರ್ಶನ್ ಬಜೆ,ಹರೀಂದ್ರ ಪೈ ನೈನಾಡು,ಲಕ್ಷ್ಮಿ ನಾರಾಯಣ ಉಡುಪ ಪುಂಜಾಲಕಟ್ಟೆ,ಪುನೀತ್ ಕುಮಾರ್ ಮಡಂತ್ಯಾರು, ಕರುಣಾಕರ ಪೂಜಾರಿ ಮಾಳಿಗೆ ಮನೆ,ಲಕ್ಷ್ಮೀ ನಾರಾಯಣ ಹೆಗ್ಡೆ ಪುಂಜಾಲಕಟ್ಟೆ, ಹರೀಶ್ ಪ್ರಭು ಕಜೆಕಾರು,ರಮೇಶ್ ಶೆಟ್ಟಿ ಮಜಲೋಡಿ ಚಾಲನೆ ನೀಡಿದರು.

ಸಾಮೂಹಿಕ ವಿವಾಹದಲ್ಲಿ 11 ಜೋಡಿ ನವವಧುವರರು ಹಸೆಮಣೆಯನ್ನೇರಿ ಗೃಹಸ್ಥಾಶ್ರಮದ ದೀಕ್ಷೆಯನ್ನು ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಸ್ಥಾಪಕಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಕ್ಲಬ್ ನ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ,ಗೌರಾವಾಧ್ಯಕ್ಷ ಅಬ್ದುಲ್ಲಾ ಪಿ,ಕಾರ್ಯದರ್ಶಿ ಜಯರಾಜ್ ಅತ್ತಾಜೆ,ಸಂಚಾಲಕ ರಾಜೇಶ್ ಪಿ.ಪುಂಜಾಲಕಟ್ಟೆ, ಪ್ರೊಫೆಸರ್ ರಂಜಿತ್ ಹೆಚ್‌ಡಿ ಸುಧಾಮ ಬಳಂಜ, ಉಪಸ್ಥಿತರಿದ್ದರು.

ಕ್ಲಬ್ ನ ಪದಾಧಿಕಾರಿಗಳು ಸಹಕರಿಸಿದರು.

ಕಾರ್ಯಕ್ರಮದ ಅಂಗವಾಗಿ ಎ. 29 ರಂದು ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು,ಎ.30 ರಂದು ಬೆಳಿಗ್ಗೆ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮುಂಬಾಗದಿಂದ ಡಿಬ್ಬಣದ ಮೆರವಣಿಗೆ ಹೊರಟು.ಮಧ್ಯಾಹ್ನ ಪೆರ್ಡೂರು ಮೇಳದವರಿಂದ ಕುಶ ಲವ ಯಕ್ಷಗಾನ ಪ್ರದರ್ಶನ, ಸಂಜೆ ಪಿಲಿಬೇಟೆ ಕಿರು ಚಿತ್ರ ಪ್ರದರ್ಶನ,’ರಾತ್ರಿ ತಾಂಬೂಲ ಕಲಾವಿದೆರ್ ಇವರಿಂದ ಪರಿಮಳ ಕಾಲನಿ ನಾಟಕ ಪ್ರದರ್ಶನ ನಡೆಯಲಿದೆ.

Related posts

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya
error: Content is protected !!