29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

ಬೆಳ್ತಂಗಡಿ:- ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ವಸಂತ್ ಬಂಗೇರ ವಿಸ್ವಾಸ ವ್ಯಕ್ತಪಡಿಸಿದ್ದಾರೆ. ಪಡಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಮತಯಾಚನೆ ಮಾಡಿ ಮಾತ್ನಾಡಿದ ಬಂಗೇರರು, ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು. ಡಿಸಿಸಿ ಅಧ್ಯಕ್ಷರಾದ ಹರೀಶ್ ಕುಮಾರ್ ಮಾತ್ನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಬೇಕಾದರೆ ರಕ್ಷಿತ್ ಶಿವರಾಂ ಗೆಲ್ಲಬೇಕು. ಕರಾವಳಿ ಜಿಲ್ಲೆಗಳಲ್ಲಿ ಬದಲಾವಣೆಯ ಪರ್ವ ಶುರುವಾಗಿದೆ. ಅದು ಬೆಳ್ತಂಗಡಿ ತಾಲೂಕುನಿಂದಲೇ ಶುರುವಾಗಲಿದೆ. ಮತಯಾಚನೆ ವೇಳೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶೇಖರ್ ಕುಕ್ಯಾಡಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ಸುಶೀಲಾ, ಕುಕ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪದ್ಮನಾಭ್ , ಪಡಂಗಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮ್ಯಾಕ್ಸಿನ್ ಕ್ರಾಸ್ದ, ಬಳಂಜೆ ಪಂಚಾಯಿತಿ ಸದಸ್ಯರು ರವೀಂದ್ರ ಬಿ ಅಮೀನ್, ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

Related posts

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!