23.9 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

ವೇಣೂರು:ಮೋಟಾರು ಸೈಕಲ್ ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ತಡೆದು ನಿಲ್ಲಿಸಿ ವಿಚಾರಿಸಿದಾಗ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವ ಪ್ರಕರಣ ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ಅವರ ನೇತೃತ್ವದಲ್ಲಿ ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಗ್ರಾಮದ ಹಂದೆವು ಮೂರು ಮಾರ್ಗದ ಬಳಿ ವಾಹನ ತಪಾಸಣೆ ಮಾಡುತ್ತಿದ್ದಾಗ ಸಂಶಯಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸಿತ್ತಿರುವುದು ಕಂಡು ಬಂದಿದೆ.ಆರೋಪಿಯನ್ನು ಬಂಧಿಸಿ ಸುಮಾರು ರೂ 37 ಸಾವಿರದ 500 ಗ್ರಾಂ ಗಾಂಜಾ ಹಾಗೂ ಮೋಟಾರು ಸೈಕಲ್ ನ್ನು ವಶಪಡಿಸಲಾಗಿದ್ದು ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ಕಡಬ ತಾಲೂಕಿನ ಸವಣೂರು ಗ್ರಾಮದ ಪ್ರಸಾದ್ ಯಾನೆ ಪಚ್ಚು ಎಂದು ಗುರುತಿಸಲಾಗಿದೆಅರೋಪಿಯು ರೌಡಿ ಶೀಟರ್ ಆಗಿದ್ದು ಅವನ ವಿರುದ್ದ ಪುತ್ತೂರು,ಕಡಬ ಉಪ್ಪಿನಂಗಡಿ ಠಾಣೆಗಳಲ್ಲಿ ಕಳ್ಳತನ ,ಹೊಡೆದಾಟ ಪ್ರಕರಣಗಳು ದಾಖಲಾಗಿವೆ. ಕಾರ್ಯಾರಣೆಯಲ್ಲಿ ಪೋಲಿಸ್ ವೃತ್ತ ನಿರೀಕ್ಷಕರ ಜೊತೆ ಸಿಬ್ಬಂದಿಗಳಾದ ಇಬ್ರಾಹಿಂ,ಅಭಿಜಿತ್ ಕುಮಾರ್,ವಿಜಯ್ ಕುಮಾರ್,ಚೌಡಪ್ಪ, ಚಾಲಕ ಚಿದಾನಂದ ಇದ್ದರು.

Related posts

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya
error: Content is protected !!