25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

ವೇಣೂರು:ಮೋಟಾರು ಸೈಕಲ್ ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ತಡೆದು ನಿಲ್ಲಿಸಿ ವಿಚಾರಿಸಿದಾಗ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವ ಪ್ರಕರಣ ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ಅವರ ನೇತೃತ್ವದಲ್ಲಿ ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಗ್ರಾಮದ ಹಂದೆವು ಮೂರು ಮಾರ್ಗದ ಬಳಿ ವಾಹನ ತಪಾಸಣೆ ಮಾಡುತ್ತಿದ್ದಾಗ ಸಂಶಯಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸಿತ್ತಿರುವುದು ಕಂಡು ಬಂದಿದೆ.ಆರೋಪಿಯನ್ನು ಬಂಧಿಸಿ ಸುಮಾರು ರೂ 37 ಸಾವಿರದ 500 ಗ್ರಾಂ ಗಾಂಜಾ ಹಾಗೂ ಮೋಟಾರು ಸೈಕಲ್ ನ್ನು ವಶಪಡಿಸಲಾಗಿದ್ದು ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ಕಡಬ ತಾಲೂಕಿನ ಸವಣೂರು ಗ್ರಾಮದ ಪ್ರಸಾದ್ ಯಾನೆ ಪಚ್ಚು ಎಂದು ಗುರುತಿಸಲಾಗಿದೆಅರೋಪಿಯು ರೌಡಿ ಶೀಟರ್ ಆಗಿದ್ದು ಅವನ ವಿರುದ್ದ ಪುತ್ತೂರು,ಕಡಬ ಉಪ್ಪಿನಂಗಡಿ ಠಾಣೆಗಳಲ್ಲಿ ಕಳ್ಳತನ ,ಹೊಡೆದಾಟ ಪ್ರಕರಣಗಳು ದಾಖಲಾಗಿವೆ. ಕಾರ್ಯಾರಣೆಯಲ್ಲಿ ಪೋಲಿಸ್ ವೃತ್ತ ನಿರೀಕ್ಷಕರ ಜೊತೆ ಸಿಬ್ಬಂದಿಗಳಾದ ಇಬ್ರಾಹಿಂ,ಅಭಿಜಿತ್ ಕುಮಾರ್,ವಿಜಯ್ ಕುಮಾರ್,ಚೌಡಪ್ಪ, ಚಾಲಕ ಚಿದಾನಂದ ಇದ್ದರು.

Related posts

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya
error: Content is protected !!