23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು.

ಹರೀಶ್ ಪೂಂಜರರವರು ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಮೊದಲಿಗರು, ತಾಲೂಕಿನ ಸರ್ವತೋಮುಖ ಅಭಿವೃದ್ಧಿಯ ಹಿಂದೆ ಹರೀಶ್ ಪೂಂಜರವರ ಶ್ರಮವಿದೆ. ಮತ್ತೊಮ್ಮೆ ಮತದಾರರು ಅವರನ್ನು ಆಶೀವರ್ದಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು.ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಳೆದ 5 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮಾತನಾಡಿ, ಈ ಬಾರಿ 50 ಸಾವಿರ ಮತಗಳ ಅಂತರದಿಂದ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕೆಂದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಸದಾನಂದ ಪೂಜಾರಿ ಉಂಗೀಲಬೈಲು, ಜಯಾನಂದ ಗೌಡ,ಸಂತೋಷ್ ಕುಮಾರ್ ಜೈನ್, ಶ್ರೀನಿವಾಸ್ ರಾವ್, ಹಿತೇಶ್ ಕಾಪಿನಡ್ಕ, ವಿಶ್ವನಾಥ ಹೊಳ್ಳ,ಸಂತೋಷ್ ಶೆಟ್ಟಿ ಹಲ್ಲಂದೋಡಿ,ಅಶೋಕ್ ಗೋವಿಯಾಸ್,ರಾಜೇಶ್ ಆಚಾರ್ಯ ಹಾಗೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya
error: Content is protected !!