ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಪುಂಜಾಲಕಟ್ಟೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಮೇ. 1 ರಂದು ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಮಡಂತ್ಯಾರು, ಪಣಕಜೆ ಪರಿಸರದ ಅಂಗಡಿ ಮತ್ತು ಮನೆಗಳಿಗೆ ತೆರಳಿ ಎಸ್ಡಿಪಿಐ ಪಕ್ಷದ ಪರವಾಗಿ ಮತ ಚಲಾಯಿಸಬೇಕೆಂದು ಜನರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಎಸ್ಡಿಪಿಐ ಪಕ್ಷದ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಮಡಂತ್ಯಾರು ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬ್ಲಾಕ್ ಅಧ್ಯಕ್ಷರಾದ ಅಶ್ಫಾಕ್ ಪುಂಜಾಲಕಟ್ಟೆ, ಸ್ವಾಲಿ ಮದ್ದಡ್ಕ, ನೌಶಾನ್ ಪಣಕಜೆ, ರೌಫ್ ಪುಂಜಾಲಕಟ್ಟೆ, ಸ್ಥಳೀಯ ಗ್ರಾಮ ಸಮಿತಿ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!