25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ರವರನ್ನು ಶಾಸಕರು ಹಾಗೂ ಇವರ ಬೆಂಬಲಿಗರು ಫೇಸ್‌ಬುಕ್ ನಕಲಿ ಪೇಜ್ ಮತ್ತು ಖಾತೆಗಳಲ್ಲಿ ತೇಜೋವಧೆ ಮಾಡುತ್ತಿರುವುದನ್ನು ತಾಲೂಕಿನ ಎಲ್ಲಾ ಬಿಲ್ಲವ ಸಂಘಗಳು ಒಕ್ಕೊರಳಿನಿಂದ ಖಂಡಿಸುತ್ತೇವೆ ಎಂದು ಯುವ ವಾಹಿನಿ ಮಂಗಳೂರು ಇದರ ಅಧ್ಯಕ್ಷ ಎಂ.ಕೆ ಪ್ರಸಾದ್ ಹೇಳಿದರು.

ಅವರು ಮೇ.1 ರಂದು ಬೆಳ್ತಂಗಡಿ ಶ್ರೀ ಗುರುನಾರಾಯನ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಕಾಶ್ ಕೋಟ್ಯಾನ್ ಎನ್ನುವ ನಕಲಿ ಹೆಸರಿನ ಫೇಸ್‌ಬುಕ್ ಖಾತೆಯಿಂದ ಸತ್ಯಜಿತ್ ಸುರತ್ಕಲ್ ಇವರನ್ನು ತೇಜೋವಧೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಇದನ್ನು ಬಿಲ್ಲವ ಸಮಾಜ ಎಂದಿಗೂ ಸಹಿಸುವುದಿಲ್ಲ. ಈ ನಕಲಿ ಫೇಸ್‌ಬುಕ್ ಖಾತೆಯಿಂದ ಹಲವು ಬಾರಿ ನಮ್ಮ ಸಮಾಜದ ಮುಖಂಡರನ್ನು ಅವಹೇಳನ ಮಾಡುವ ಮೂಲಕ ಬಿಲ್ಲವ ಸಮಾಜ ಹಾಗೂ ಧಮನಿತ ಸಮಾಜದ ನಡುವೆ ಗೊಂದಲಗಳನ್ನು ಮೂಡಿಸುತ್ತಿರುವುದು ಕಂಡುಬಂದಿರುತ್ತದೆ. ಇಲ್ಲಿ ನಾವು ಯಾವುದೇ ಪಕ್ಷದ ಪರವಾಗಿ ಅಥವಾ ರಾಜಕೀಯ ವ್ಯಕ್ತಿಯ ಪರವಾಗಿ ಮಾತನಾಡುತ್ತಿಲ್ಲ ಸತ್ಯಜಿತ್ ಸುರತ್ಕಲ್ ಇವರಿಗೆ ಈಗ ಯಾವುದೇ ಪಕ್ಷದಲ್ಲಿಯಾಗಲಿ ಹಿಂದೂ ಸಂಘಟನೆಯಲ್ಲಾಗಲಿ ಜವಾಬ್ದಾರಿಯಿಲ್ಲ. ಕಳೆದ ಮೂರು ವರ್ಷಗಳಿಂದ ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜಾಧ್ಯಕ್ಷರಾಗಿ ಜವಾಬ್ದಾರಿಯನ್ನು ತೆಗೆದುಕೊಂಡು ಬಿಲ್ಲವ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಾ ಇದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ಹೋಗುತ್ತಾ ಇಲ್ಲವೆಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಕೋಟ್ಯಾನ್, ಯುವ ವಾಹಿನಿ ತಾಲೂಕು ಅಧ್ಯಕ್ಷ ಅಶೋಕ್ ಕುಮಾರ್, ಪ್ರಮುಖರಾದ ಮಾಧವ ಪೂಜಾರಿ ಉಪಸ್ಥಿತರಿದ್ದರು.

Related posts

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!