April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

ಹೊಕ್ಕಾಡಿಗೋಳಿ: ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರೈಶಾ ಸುಹಾನ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯವರಿಂದ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸುವ 2022-23ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸರ್ಟಿಫಿಕೇಟ್ (ಎನ್.ಎಂ.ಎಂ.ಎಸ್) ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ.
ಈ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮುಂದಿನ ನಾಲ್ಕು ವರ್ಷಗಳ ಕಾಲ ಅಂದರೆ ಅವರ ಪಿಯುಸಿ ಶಿಕ್ಷಣದವರೆಗೆ ಮಾಸಿಕ ರೂಪಾಯಿ 1000 ದಂತೆ ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ ಆಯ್ಕೆಯಾಗಿರುವ 30 ವಿದ್ಯಾರ್ಥಿಗಳಲ್ಲಿ ಒಬ್ಬರಾದ ಇವರು ಅಂಗರಕರಿಯದ ಅಬ್ದುಲ್ ರಝಾಕ್ ಹಾಗೂ ಶ್ರೀಮತಿ ಸಕೀನಾ ಇವರ ಪುತ್ರಿಯಾಗಿದ್ದಾರೆ.

ಇವರಿಗೆ ಶಾಲೆಯ ಶಿಕ್ಷಕರು ಮಾರ್ಗದರ್ಶನ ನೀಡಿರುತ್ತಾರೆ.

Related posts

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya
error: Content is protected !!