37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

ಹೊಕ್ಕಾಡಿಗೋಳಿ: ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರೈಶಾ ಸುಹಾನ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯವರಿಂದ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸುವ 2022-23ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸರ್ಟಿಫಿಕೇಟ್ (ಎನ್.ಎಂ.ಎಂ.ಎಸ್) ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ.
ಈ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮುಂದಿನ ನಾಲ್ಕು ವರ್ಷಗಳ ಕಾಲ ಅಂದರೆ ಅವರ ಪಿಯುಸಿ ಶಿಕ್ಷಣದವರೆಗೆ ಮಾಸಿಕ ರೂಪಾಯಿ 1000 ದಂತೆ ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ ಆಯ್ಕೆಯಾಗಿರುವ 30 ವಿದ್ಯಾರ್ಥಿಗಳಲ್ಲಿ ಒಬ್ಬರಾದ ಇವರು ಅಂಗರಕರಿಯದ ಅಬ್ದುಲ್ ರಝಾಕ್ ಹಾಗೂ ಶ್ರೀಮತಿ ಸಕೀನಾ ಇವರ ಪುತ್ರಿಯಾಗಿದ್ದಾರೆ.

ಇವರಿಗೆ ಶಾಲೆಯ ಶಿಕ್ಷಕರು ಮಾರ್ಗದರ್ಶನ ನೀಡಿರುತ್ತಾರೆ.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya
error: Content is protected !!