September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

ಹೊಕ್ಕಾಡಿಗೋಳಿ: ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರೈಶಾ ಸುಹಾನ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯವರಿಂದ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸುವ 2022-23ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸರ್ಟಿಫಿಕೇಟ್ (ಎನ್.ಎಂ.ಎಂ.ಎಸ್) ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ.
ಈ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮುಂದಿನ ನಾಲ್ಕು ವರ್ಷಗಳ ಕಾಲ ಅಂದರೆ ಅವರ ಪಿಯುಸಿ ಶಿಕ್ಷಣದವರೆಗೆ ಮಾಸಿಕ ರೂಪಾಯಿ 1000 ದಂತೆ ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ ಆಯ್ಕೆಯಾಗಿರುವ 30 ವಿದ್ಯಾರ್ಥಿಗಳಲ್ಲಿ ಒಬ್ಬರಾದ ಇವರು ಅಂಗರಕರಿಯದ ಅಬ್ದುಲ್ ರಝಾಕ್ ಹಾಗೂ ಶ್ರೀಮತಿ ಸಕೀನಾ ಇವರ ಪುತ್ರಿಯಾಗಿದ್ದಾರೆ.

ಇವರಿಗೆ ಶಾಲೆಯ ಶಿಕ್ಷಕರು ಮಾರ್ಗದರ್ಶನ ನೀಡಿರುತ್ತಾರೆ.

Related posts

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya
error: Content is protected !!