March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

ಶಿಬಾಜೆ : ಶಿಬಾಜೆ ಗ್ರಾಮದ ಭಂಡಿಹೊಳೆ ಪ್ರದೇಶದಲ್ಲಿ ಸ್ಥಳೀಯ ಯುವಕರ ಸಹಕಾರದಲ್ಲಿ ರಸ್ತೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೇ 1 ರಂದು ಜರುಗಿತು.


ಬೆಳಿಗ್ಗೆ 7 ರಿಂದ 11 ಗಂಟೆಯವರಿಗೆ ಸುಮಾರು 4 ಗಂಟೆಗಳ ಕಾಲ ಕೆಲಸ ನಡೆಸಲಾಯಿತು. ನವೀನ ದಾಮ್ಲೆ, ಕಾರ್ತಿಕ್ ದಾಮ್ಲೆ, ಅವಿನಾಶ್ ಭಿಡೆ, ಪ್ರಾಣೇಶ ಖರೆ, ಪ್ರಭಾಂಜನ್ ಭಿಡೆ, ಶಕ್ತಿ ಪ್ರಸಾದ್ ಅಭ್ಯಂಕರ್ ಮುಂತಾದವರು ಸೇರಿ ಸುಮಾರು ೨೦ ಗೋಣಿಚೀಲದಲ್ಲಿ ಕಸ (ಮುಖ್ಯವಾಗಿ ಬಾಟಲ್ ಹಾಗೂ ಪ್ಲಾಸ್ಟಿಕ್) ಸಂಗ್ರಹಿಸಿ ರಸ್ತೆ ಬದಿಯಲ್ಲಿ ಶೇಖರಿಸಿ ಇಡಲಾಯಿತು. ನಂತರ ವಾಹನದಲ್ಲಿ ಅದನ್ನು ವಿಲೇವಾರಿ ಮಾಡಲು ಪಂಚಾಯತ್‌ಗೆ ತಿಳಿಸಲಾಯಿತು.

ಪ್ರಕೃತಿ ಪ್ರಿಯರ ಈ ತಂಡ ದಲ್ಲಿ ಹೆಚ್ಚಿನವರು ವರ್ಕ್ ಫ್ರಮ್ ಹೋಂ ನಲ್ಲಿರುವವರು. ಇವರು ಕಾರ್ಮಿಕರ ದಿನಾಚರಣೆಯನ್ನು ಈ ರೀತಿ ವಿಶೇಷವಾಗಿ ಆಚರಿಸಿದರು. ನಂತರ ಪರಿಸರ ಜಾಗೃತಿಗಾಗಿ ಬ್ಯಾನರ್‌ಗಳನ್ನು ತಯಾರಿಸಿ ಅದನ್ನು ರಸ್ತೆ ಬದಿಯಲ್ಲಿ ಹಾಕುವ ಕೆಲಸವನ್ನು ಕೂಡ ಮಾಡಲಾಯಿತು. ಸ್ಥಳೀಯರ ಸಹಕಾರದಿಂದ ಉಪಹಾರ ಹಾಗೂ ಪಾನೀಯ ವ್ಯವಸ್ಥೆ ಮಾಡಲಾಯಿತು.

Related posts

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya
error: Content is protected !!