32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

ಶಿಬಾಜೆ : ಶಿಬಾಜೆ ಗ್ರಾಮದ ಭಂಡಿಹೊಳೆ ಪ್ರದೇಶದಲ್ಲಿ ಸ್ಥಳೀಯ ಯುವಕರ ಸಹಕಾರದಲ್ಲಿ ರಸ್ತೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೇ 1 ರಂದು ಜರುಗಿತು.


ಬೆಳಿಗ್ಗೆ 7 ರಿಂದ 11 ಗಂಟೆಯವರಿಗೆ ಸುಮಾರು 4 ಗಂಟೆಗಳ ಕಾಲ ಕೆಲಸ ನಡೆಸಲಾಯಿತು. ನವೀನ ದಾಮ್ಲೆ, ಕಾರ್ತಿಕ್ ದಾಮ್ಲೆ, ಅವಿನಾಶ್ ಭಿಡೆ, ಪ್ರಾಣೇಶ ಖರೆ, ಪ್ರಭಾಂಜನ್ ಭಿಡೆ, ಶಕ್ತಿ ಪ್ರಸಾದ್ ಅಭ್ಯಂಕರ್ ಮುಂತಾದವರು ಸೇರಿ ಸುಮಾರು ೨೦ ಗೋಣಿಚೀಲದಲ್ಲಿ ಕಸ (ಮುಖ್ಯವಾಗಿ ಬಾಟಲ್ ಹಾಗೂ ಪ್ಲಾಸ್ಟಿಕ್) ಸಂಗ್ರಹಿಸಿ ರಸ್ತೆ ಬದಿಯಲ್ಲಿ ಶೇಖರಿಸಿ ಇಡಲಾಯಿತು. ನಂತರ ವಾಹನದಲ್ಲಿ ಅದನ್ನು ವಿಲೇವಾರಿ ಮಾಡಲು ಪಂಚಾಯತ್‌ಗೆ ತಿಳಿಸಲಾಯಿತು.

ಪ್ರಕೃತಿ ಪ್ರಿಯರ ಈ ತಂಡ ದಲ್ಲಿ ಹೆಚ್ಚಿನವರು ವರ್ಕ್ ಫ್ರಮ್ ಹೋಂ ನಲ್ಲಿರುವವರು. ಇವರು ಕಾರ್ಮಿಕರ ದಿನಾಚರಣೆಯನ್ನು ಈ ರೀತಿ ವಿಶೇಷವಾಗಿ ಆಚರಿಸಿದರು. ನಂತರ ಪರಿಸರ ಜಾಗೃತಿಗಾಗಿ ಬ್ಯಾನರ್‌ಗಳನ್ನು ತಯಾರಿಸಿ ಅದನ್ನು ರಸ್ತೆ ಬದಿಯಲ್ಲಿ ಹಾಕುವ ಕೆಲಸವನ್ನು ಕೂಡ ಮಾಡಲಾಯಿತು. ಸ್ಥಳೀಯರ ಸಹಕಾರದಿಂದ ಉಪಹಾರ ಹಾಗೂ ಪಾನೀಯ ವ್ಯವಸ್ಥೆ ಮಾಡಲಾಯಿತು.

Related posts

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya
error: Content is protected !!