24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

ಶಿಬಾಜೆ : ಶಿಬಾಜೆ ಗ್ರಾಮದ ಭಂಡಿಹೊಳೆ ಪ್ರದೇಶದಲ್ಲಿ ಸ್ಥಳೀಯ ಯುವಕರ ಸಹಕಾರದಲ್ಲಿ ರಸ್ತೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೇ 1 ರಂದು ಜರುಗಿತು.


ಬೆಳಿಗ್ಗೆ 7 ರಿಂದ 11 ಗಂಟೆಯವರಿಗೆ ಸುಮಾರು 4 ಗಂಟೆಗಳ ಕಾಲ ಕೆಲಸ ನಡೆಸಲಾಯಿತು. ನವೀನ ದಾಮ್ಲೆ, ಕಾರ್ತಿಕ್ ದಾಮ್ಲೆ, ಅವಿನಾಶ್ ಭಿಡೆ, ಪ್ರಾಣೇಶ ಖರೆ, ಪ್ರಭಾಂಜನ್ ಭಿಡೆ, ಶಕ್ತಿ ಪ್ರಸಾದ್ ಅಭ್ಯಂಕರ್ ಮುಂತಾದವರು ಸೇರಿ ಸುಮಾರು ೨೦ ಗೋಣಿಚೀಲದಲ್ಲಿ ಕಸ (ಮುಖ್ಯವಾಗಿ ಬಾಟಲ್ ಹಾಗೂ ಪ್ಲಾಸ್ಟಿಕ್) ಸಂಗ್ರಹಿಸಿ ರಸ್ತೆ ಬದಿಯಲ್ಲಿ ಶೇಖರಿಸಿ ಇಡಲಾಯಿತು. ನಂತರ ವಾಹನದಲ್ಲಿ ಅದನ್ನು ವಿಲೇವಾರಿ ಮಾಡಲು ಪಂಚಾಯತ್‌ಗೆ ತಿಳಿಸಲಾಯಿತು.

ಪ್ರಕೃತಿ ಪ್ರಿಯರ ಈ ತಂಡ ದಲ್ಲಿ ಹೆಚ್ಚಿನವರು ವರ್ಕ್ ಫ್ರಮ್ ಹೋಂ ನಲ್ಲಿರುವವರು. ಇವರು ಕಾರ್ಮಿಕರ ದಿನಾಚರಣೆಯನ್ನು ಈ ರೀತಿ ವಿಶೇಷವಾಗಿ ಆಚರಿಸಿದರು. ನಂತರ ಪರಿಸರ ಜಾಗೃತಿಗಾಗಿ ಬ್ಯಾನರ್‌ಗಳನ್ನು ತಯಾರಿಸಿ ಅದನ್ನು ರಸ್ತೆ ಬದಿಯಲ್ಲಿ ಹಾಕುವ ಕೆಲಸವನ್ನು ಕೂಡ ಮಾಡಲಾಯಿತು. ಸ್ಥಳೀಯರ ಸಹಕಾರದಿಂದ ಉಪಹಾರ ಹಾಗೂ ಪಾನೀಯ ವ್ಯವಸ್ಥೆ ಮಾಡಲಾಯಿತು.

Related posts

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!