22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

ಶಿಬಾಜೆ : ಶಿಬಾಜೆ ಗ್ರಾಮದ ಭಂಡಿಹೊಳೆ ಪ್ರದೇಶದಲ್ಲಿ ಸ್ಥಳೀಯ ಯುವಕರ ಸಹಕಾರದಲ್ಲಿ ರಸ್ತೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೇ 1 ರಂದು ಜರುಗಿತು.


ಬೆಳಿಗ್ಗೆ 7 ರಿಂದ 11 ಗಂಟೆಯವರಿಗೆ ಸುಮಾರು 4 ಗಂಟೆಗಳ ಕಾಲ ಕೆಲಸ ನಡೆಸಲಾಯಿತು. ನವೀನ ದಾಮ್ಲೆ, ಕಾರ್ತಿಕ್ ದಾಮ್ಲೆ, ಅವಿನಾಶ್ ಭಿಡೆ, ಪ್ರಾಣೇಶ ಖರೆ, ಪ್ರಭಾಂಜನ್ ಭಿಡೆ, ಶಕ್ತಿ ಪ್ರಸಾದ್ ಅಭ್ಯಂಕರ್ ಮುಂತಾದವರು ಸೇರಿ ಸುಮಾರು ೨೦ ಗೋಣಿಚೀಲದಲ್ಲಿ ಕಸ (ಮುಖ್ಯವಾಗಿ ಬಾಟಲ್ ಹಾಗೂ ಪ್ಲಾಸ್ಟಿಕ್) ಸಂಗ್ರಹಿಸಿ ರಸ್ತೆ ಬದಿಯಲ್ಲಿ ಶೇಖರಿಸಿ ಇಡಲಾಯಿತು. ನಂತರ ವಾಹನದಲ್ಲಿ ಅದನ್ನು ವಿಲೇವಾರಿ ಮಾಡಲು ಪಂಚಾಯತ್‌ಗೆ ತಿಳಿಸಲಾಯಿತು.

ಪ್ರಕೃತಿ ಪ್ರಿಯರ ಈ ತಂಡ ದಲ್ಲಿ ಹೆಚ್ಚಿನವರು ವರ್ಕ್ ಫ್ರಮ್ ಹೋಂ ನಲ್ಲಿರುವವರು. ಇವರು ಕಾರ್ಮಿಕರ ದಿನಾಚರಣೆಯನ್ನು ಈ ರೀತಿ ವಿಶೇಷವಾಗಿ ಆಚರಿಸಿದರು. ನಂತರ ಪರಿಸರ ಜಾಗೃತಿಗಾಗಿ ಬ್ಯಾನರ್‌ಗಳನ್ನು ತಯಾರಿಸಿ ಅದನ್ನು ರಸ್ತೆ ಬದಿಯಲ್ಲಿ ಹಾಕುವ ಕೆಲಸವನ್ನು ಕೂಡ ಮಾಡಲಾಯಿತು. ಸ್ಥಳೀಯರ ಸಹಕಾರದಿಂದ ಉಪಹಾರ ಹಾಗೂ ಪಾನೀಯ ವ್ಯವಸ್ಥೆ ಮಾಡಲಾಯಿತು.

Related posts

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya
error: Content is protected !!