25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

ಶಿಬಾಜೆ : ಶಿಬಾಜೆ ಗ್ರಾಮದ ಭಂಡಿಹೊಳೆ ಪ್ರದೇಶದಲ್ಲಿ ಸ್ಥಳೀಯ ಯುವಕರ ಸಹಕಾರದಲ್ಲಿ ರಸ್ತೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೇ 1 ರಂದು ಜರುಗಿತು.


ಬೆಳಿಗ್ಗೆ 7 ರಿಂದ 11 ಗಂಟೆಯವರಿಗೆ ಸುಮಾರು 4 ಗಂಟೆಗಳ ಕಾಲ ಕೆಲಸ ನಡೆಸಲಾಯಿತು. ನವೀನ ದಾಮ್ಲೆ, ಕಾರ್ತಿಕ್ ದಾಮ್ಲೆ, ಅವಿನಾಶ್ ಭಿಡೆ, ಪ್ರಾಣೇಶ ಖರೆ, ಪ್ರಭಾಂಜನ್ ಭಿಡೆ, ಶಕ್ತಿ ಪ್ರಸಾದ್ ಅಭ್ಯಂಕರ್ ಮುಂತಾದವರು ಸೇರಿ ಸುಮಾರು ೨೦ ಗೋಣಿಚೀಲದಲ್ಲಿ ಕಸ (ಮುಖ್ಯವಾಗಿ ಬಾಟಲ್ ಹಾಗೂ ಪ್ಲಾಸ್ಟಿಕ್) ಸಂಗ್ರಹಿಸಿ ರಸ್ತೆ ಬದಿಯಲ್ಲಿ ಶೇಖರಿಸಿ ಇಡಲಾಯಿತು. ನಂತರ ವಾಹನದಲ್ಲಿ ಅದನ್ನು ವಿಲೇವಾರಿ ಮಾಡಲು ಪಂಚಾಯತ್‌ಗೆ ತಿಳಿಸಲಾಯಿತು.

ಪ್ರಕೃತಿ ಪ್ರಿಯರ ಈ ತಂಡ ದಲ್ಲಿ ಹೆಚ್ಚಿನವರು ವರ್ಕ್ ಫ್ರಮ್ ಹೋಂ ನಲ್ಲಿರುವವರು. ಇವರು ಕಾರ್ಮಿಕರ ದಿನಾಚರಣೆಯನ್ನು ಈ ರೀತಿ ವಿಶೇಷವಾಗಿ ಆಚರಿಸಿದರು. ನಂತರ ಪರಿಸರ ಜಾಗೃತಿಗಾಗಿ ಬ್ಯಾನರ್‌ಗಳನ್ನು ತಯಾರಿಸಿ ಅದನ್ನು ರಸ್ತೆ ಬದಿಯಲ್ಲಿ ಹಾಕುವ ಕೆಲಸವನ್ನು ಕೂಡ ಮಾಡಲಾಯಿತು. ಸ್ಥಳೀಯರ ಸಹಕಾರದಿಂದ ಉಪಹಾರ ಹಾಗೂ ಪಾನೀಯ ವ್ಯವಸ್ಥೆ ಮಾಡಲಾಯಿತು.

Related posts

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!