July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಎ.30 ರಂದು ಬಿಡುಗಡೆಗೊಳಿಸಿದರು.

ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಇದೀಗ ಕಿರುತೆರೆ ನಿರ್ದೇಶಕ ವಿನು ಬಳಂಜ ನಿರ್ದೇಶನದ ಮೊದಲ ಚಿತ್ರ ‘ಬೇರ’ಗೆ ಸಾಥ್ ನೀಡಿದ್ದಾರೆ. ವಿಭಿನ್ನ ಕಥೆ ಆಧಾರಿಸಿರೋ ‘ಬೇರ’ ಚಿತ್ರದ ಟೀಸರ್ ಅನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡುವ ಮೂಲಕ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ನಿರ್ದೇಶಕ ವಿನು ಬಳಂಜ ಮಾತನಾಡಿ ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು, ಬಳಿಕ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ ಎಂದು ತಿಳಿಸಿದರು.


ವಿನು ಬಳಂಜ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ ಖುಷಿಯಿದೆ. ನಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದು ಚಿತ್ರದಲ್ಲಿ ನಟಿಸಿರುವ ದತ್ತಣ್ಣ, ಯಶ್ ಶೆಟ್ಟಿ, ಹರ್ಷಿಕಾ ಪೂಣಚ್ಛ ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಮುಂತಾದವರು ಹೇಳಿದರು.

ಈ ಸಂದರ್ಭದಲ್ಲಿ ಛಾಯಾಗ್ರಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ , ನಿರ್ಮಾಪಕ ದಿವಾಕರ ದಾಸ ಉಪಸ್ಥಿತರಿದ್ದರು.

Related posts

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya
error: Content is protected !!