23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಎ.30 ರಂದು ಬಿಡುಗಡೆಗೊಳಿಸಿದರು.

ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಇದೀಗ ಕಿರುತೆರೆ ನಿರ್ದೇಶಕ ವಿನು ಬಳಂಜ ನಿರ್ದೇಶನದ ಮೊದಲ ಚಿತ್ರ ‘ಬೇರ’ಗೆ ಸಾಥ್ ನೀಡಿದ್ದಾರೆ. ವಿಭಿನ್ನ ಕಥೆ ಆಧಾರಿಸಿರೋ ‘ಬೇರ’ ಚಿತ್ರದ ಟೀಸರ್ ಅನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡುವ ಮೂಲಕ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ನಿರ್ದೇಶಕ ವಿನು ಬಳಂಜ ಮಾತನಾಡಿ ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು, ಬಳಿಕ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ ಎಂದು ತಿಳಿಸಿದರು.


ವಿನು ಬಳಂಜ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ ಖುಷಿಯಿದೆ. ನಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದು ಚಿತ್ರದಲ್ಲಿ ನಟಿಸಿರುವ ದತ್ತಣ್ಣ, ಯಶ್ ಶೆಟ್ಟಿ, ಹರ್ಷಿಕಾ ಪೂಣಚ್ಛ ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಮುಂತಾದವರು ಹೇಳಿದರು.

ಈ ಸಂದರ್ಭದಲ್ಲಿ ಛಾಯಾಗ್ರಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ , ನಿರ್ಮಾಪಕ ದಿವಾಕರ ದಾಸ ಉಪಸ್ಥಿತರಿದ್ದರು.

Related posts

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya
error: Content is protected !!