September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು.

ಹರೀಶ್ ಪೂಂಜರರವರು ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಮೊದಲಿಗರು, ತಾಲೂಕಿನ ಸರ್ವತೋಮುಖ ಅಭಿವೃದ್ಧಿಯ ಹಿಂದೆ ಹರೀಶ್ ಪೂಂಜರವರ ಶ್ರಮವಿದೆ. ಮತ್ತೊಮ್ಮೆ ಮತದಾರರು ಅವರನ್ನು ಆಶೀವರ್ದಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು.ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಳೆದ 5 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮಾತನಾಡಿ, ಈ ಬಾರಿ 50 ಸಾವಿರ ಮತಗಳ ಅಂತರದಿಂದ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕೆಂದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಸದಾನಂದ ಪೂಜಾರಿ ಉಂಗೀಲಬೈಲು, ಜಯಾನಂದ ಗೌಡ,ಸಂತೋಷ್ ಕುಮಾರ್ ಜೈನ್, ಶ್ರೀನಿವಾಸ್ ರಾವ್, ಹಿತೇಶ್ ಕಾಪಿನಡ್ಕ, ವಿಶ್ವನಾಥ ಹೊಳ್ಳ,ಸಂತೋಷ್ ಶೆಟ್ಟಿ ಹಲ್ಲಂದೋಡಿ,ಅಶೋಕ್ ಗೋವಿಯಾಸ್,ರಾಜೇಶ್ ಆಚಾರ್ಯ ಹಾಗೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!