25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

ಕೊಕ್ಕಡ: ಕಳೆದ ಮಾರ್ಚ್‌ನಲ್ಲಿ ಇಲ್ಲಿಯ ಸರಕಾರಿ ಪ್ರೌಢ ಶಾಲೆಗೆ ನುಗ್ಗಿ ಶಾಲೆಯೊಳಗೆ ಇದ್ದ ಸುಮಾರು ರೂ. 3.20 ಲಕ್ಷ ಮೌಲ್ಯದ ಆ ನಿರುಪಯುಕ್ತ ಬ್ಯಾಟರಿಗಳನ್ನು ಕಳವು ಮಾಡಿದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಮಾ. 27ರಂದು ಯಾರೋ ಕಳ್ಳರು ಶಾಲೆಯ ಒಳಗೆ ನುಗ್ಗಿ ಕೊಠಡಿಯಲ್ಲಿದ್ದ ನಿರುಪಯುಕ್ತರ ಬ್ಯಾಟರಿಯನ್ನು ಕಳವು ಮಾಡಿದ ಬಗ್ಗೆ ಪ್ರಭಾರ ಮುಖ್ಯೋಪಾಧ್ಯಾಯ ಹಲ್ಲಿಂಗೇರಿ ಪ್ರಭಾಕರ ನಾಯ್ಕ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕೈಗೊತ್ತಿಕೊಂಡ ಪೊಲೀಸರು ಇದೀಗ ಆರೋಪಿಗಳಾದ ರಕ್ಷಿತ್ ಡಿ ( 24 ವರ್ಷ) ಬೋಲ ಮನೆ ಕುಟ್ರಪಾಡಿ ಕಡಬ, ತೀರ್ದ ಎಂ(29 ವರ್ಷ) ಮೀನಾಡಿಮನೆ, ಕುಟ್ರಪಾಡಿ, ಯದ್ದೇಶ್ ಯು.ಕೆ (30 ವರ್ಷ) ಉರುಂಬಿ ಮನೆ, ಕುಟ್ರಪಾಡಿ, ಲೋಹಿತ್ ಹೆಚ್. ಶೆಟ್ಟಿ (23 ವರ್ಷ) ಹಳ್ಳಿಮನೆ, ಗ್ರಾಮ, ಕಡಬ ಅಂಚೆ, ಕಡಬ ತಾಲೂಕು ರವರುಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿಗಳು ಉಪ್ಪಿನಂಗಡಿಯ ನಾಲ್ಕು ಸರಕಾರಿ ಶಾಲೆಗಳಿಂದ, ಸುಬ್ರಹ್ಮಣ್ಯದ ಎರಡು ಸರಕಾರಿ ಶಾಲೆಗಳಿಂದ, ಪುತ್ತೂರಿನ ಒಂದು ಶಾಲೆಯಿಂದ, ಬಂಟ್ವಾಳದ ಒಂದು ಶಾಲೆ ಮತ್ತು ಧರ್ಮಸ್ಥಳದ ಒಂದು ಶಾಲೆಯಿಂದ ಸೇರಿದಂತೆ ದ.ಕ ಜಿಲ್ಲೆಯ 39 ಸರಕಾರಿ ಪ್ರೌಢ ಶಾಲೆಗಳಿಂದ ಸುಮಾರು ರೂ. 2ಲಕ್ಷ ಮೌಲ್ಯದ ಬ್ಯಾಟರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಂದ ರೂ. 1 ಲಕ್ಷದ ಮಾರುತಿ ಅಲ್ಟೋ ಕಾರು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕಬ್ಬಿಣದ ಲಿವರ್, ಕಟ್ಟಿಂಗ್ ಪ್ಲೇಯರ್, ಅಕ್ಸೋ ಬೇಡ್, ಟಾರ್ಚ್, ಟೋಪಿ, ಸೇರಿದಂತ ಅಂದಾಜು ಮೌಲ್ಯ ರೂ.3 ಲಕ್ಷದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಎಸ್.ಪಿ ಡಾ| ವಿಕ್ರಮ್ ಅಮಟೆ ಐ.ಪಿ.ಎಸ್ ರವರ ನಿರ್ದೇಶನದಂತೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎನ್.ಎಂ. ಬಂಟ್ವಾಳ ಡಿ.ವೈ.ಎಸ್.ಪಿ ಪ್ರತಾಪ್ ಸಿಂಗ್ ಥೋರಾಟ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ಶಿವಕುಮಾರ ಬಿ ರವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ (ಕಾ.ಸು) ಅನೀಲಕುಮಾರ ಡಿ. ಪಿ.ಎಸ್.ಐ (ತನಿಖೆ) ರೇಣುಕ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ವಿ.ಎಸ್.ಐ ಸ್ಯಾಮುವೆಲ್, ರಾಜೇಶ್, ಪ್ರಶಾಂತ, ಸತೀಶ ನಾಯ್ಕ ಲಾರೆನ್ಸ್ ಪಿ.ಆರ್, ಕೃಷ್ಣಪ್ಪ, ಶೇಖರ ಗೌಡ, ಮಂಜುನಾಥ, ಪ್ರಮೋದಿನಿ, ಅನಿಲ್ ಕುಮಾರ್, ಜಗದೀಶ, ಹರೀಶ್, ನಾಗರಾಜ, ರಾಧಾ ಕೋಟ್ಯಾನ್ ಮತ್ತು ವಾಹನ ಚಾಲಕ ಲೋಕೇಶ್ ಸಹಕರಿಸಿದ್ದರು.

Related posts

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya
error: Content is protected !!