26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಖಂಡಿಸಿದ್ದಾರೆ.

ಲವ್ ಜಿಹಾದ್, ಗೋ ಹತ್ಯೆಯಂತಹ ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಸದಾ ಗುಡುಗುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದು ಮೂರ್ಖತನದ ನಿರ್ಧಾರ, ಭಯೋತ್ಪಾದನೆಯ ವಿರುದ್ಧ ರಾಷ್ಟ್ರ ಜಾಗೃತಿಯ ಕೆಲಸ ಮಾಡುತ್ತಿರುವ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ತುಂಬಿದ ಭಜರಂಗದಳವನ್ನು ಹಳ್ಳಿಹಳ್ಳಿಯಲ್ಲಿರುವ ದೇವಸ್ಮಾನ, ದೈವಸ್ಥಾನಗಳ ಜೀರ್ಣೋದ್ದಾರದ ಮೂಲಕ ಸಂರಕ್ಷಣೆ ಮಾಡುತ್ತಿರುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಆಶ್ವಾಸನೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ.

ಕಾಂಗ್ರೆಸ್ ಪಕ್ಷದ ಈ ನಿರ್ಧಾರ ಹಿಂದೂ ದಮನಕಾರಿ ನೀತಿಯನ್ನು ಪ್ರದರ್ಶಿಸುತ್ತಿದೆ. ಕಾಂಗ್ರೆಸ್ಸಿನ ಈ ಹಿಂದೂ ವಿರೋಧಿ ನೀತಿಗೆ ಮತದಾನದ ದಿನ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ, ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ನೀತಿಯಿಂದಲೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!